ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಮಟ್ಟದಲ್ಲಿ ನಡೆಯುವ ಜಯಂತ್ಯುತ್ಸವಕ್ಕೆ ಸರ್ಕಾರ ₹ 50 ಸಾವಿರ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕ್ರಮಗಳಿಗೆ ₹ 25 ಸಾವಿರ ಅನುದಾನ ನೀಡುತ್ತದೆ. ಇದರ ಒಟ್ಟು ಮೊತ್ತ ₹ 2.75 ಲಕ್ಷ ಆಗಲಿದ್ದು, ಅದನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಲ್ಲಿಸಲಾಗುವುದು’ ಎಂದರು.