<p><strong>ಕಲಬುರಗಿ</strong>: ‘ಸಂಸತ್ ಅಧಿವೇಶನದ ವೇಳೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಅಧಿವೇಶನದ ಚರ್ಚೆಗಳಿಗಿಂತ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಮತಗಳನ್ನು ಕೊಡಿಸುವುದೇ ಚಿಂತೆಯಾಗಿದೆ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.</p>.<p>ಜೇವರ್ಗಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಹಿಂದಿನ ಯಾವ ಪ್ರಧಾನಿಯೂ ಅಧಿವೇಶನವನ್ನು ನಿರ್ಲಕ್ಷಿಸಿದ್ದನ್ನು ನಾನು ಕಂಡಿಲ್ಲ’ ಎಂದು ಟೀಕಿಸಿದರು.</p>.<p>‘ಸರ್ಕಾರಿ ಕಾರ್ಯಕ್ರಮವನ್ನು ಮೋದಿ ಅವರು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಂಡರು. ಅಲ್ಲದೆ ಪಕ್ಷದ ಕಾರ್ಯಕ್ರಮವಾಗಿ ರೂಪಿಸಿದರು. ಮೊದಲ ದಿನ ಕಲಾಪಕ್ಕೆ ಬಂದು ಹೋದವರು ನಾಪತ್ತೆಯಾದರು’ ಎಂದು ಟೀಕಿಸಿದರು.</p>.<p>‘ಮೋದಿ ಹಾಗೂ ಬಿಜೆಪಿಯವರು ಡಾ. ಬಿ.ಆರ್.ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ನೆಹರೂ, ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಭದ್ರ ಬುನಾದಿಯನ್ನು ಹಾಕಿದ್ದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ‘ಸಂಸತ್ ಅಧಿವೇಶನದ ವೇಳೆ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅವರಿಗೆ ಅಧಿವೇಶನದ ಚರ್ಚೆಗಳಿಗಿಂತ ಉತ್ತರ ಪ್ರದೇಶದಲ್ಲಿ ಪಕ್ಷಕ್ಕೆ ಮತಗಳನ್ನು ಕೊಡಿಸುವುದೇ ಚಿಂತೆಯಾಗಿದೆ’ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.</p>.<p>ಜೇವರ್ಗಿಯಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ‘ಹಿಂದಿನ ಯಾವ ಪ್ರಧಾನಿಯೂ ಅಧಿವೇಶನವನ್ನು ನಿರ್ಲಕ್ಷಿಸಿದ್ದನ್ನು ನಾನು ಕಂಡಿಲ್ಲ’ ಎಂದು ಟೀಕಿಸಿದರು.</p>.<p>‘ಸರ್ಕಾರಿ ಕಾರ್ಯಕ್ರಮವನ್ನು ಮೋದಿ ಅವರು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಂಡರು. ಅಲ್ಲದೆ ಪಕ್ಷದ ಕಾರ್ಯಕ್ರಮವಾಗಿ ರೂಪಿಸಿದರು. ಮೊದಲ ದಿನ ಕಲಾಪಕ್ಕೆ ಬಂದು ಹೋದವರು ನಾಪತ್ತೆಯಾದರು’ ಎಂದು ಟೀಕಿಸಿದರು.</p>.<p>‘ಮೋದಿ ಹಾಗೂ ಬಿಜೆಪಿಯವರು ಡಾ. ಬಿ.ಆರ್.ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ. ನೆಹರೂ, ಅಂಬೇಡ್ಕರ್ ಅವರು ಪ್ರಜಾಪ್ರಭುತ್ವದ ಭದ್ರ ಬುನಾದಿಯನ್ನು ಹಾಕಿದ್ದರು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>