ಮಹಾತ್ಮ ಗಾಂಧೀಜಿ ಗ್ರಾಹಕರ ಹಿತರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ, ವಕೀಲ ವೈಜನಾಥ ಎಸ್. ಝಳಕಿ ಮಾತನಾಡಿ, ‘ಗ್ರಾಹಕರ ಹಿತರಕ್ಷಣಾ ಕಾಯ್ದೆ–2019 ನೊಂದ ಗ್ರಾಹಕರಿಗೆ ಆಪ್ತರಕ್ಷಕನಂತೆ ಕಾರ್ಯನಿರ್ವಹಿಸುತ್ತದೆ. ತಿದ್ದುಪಡಿ ಕಾಯ್ದೆಯ ಪ್ರಕಾರ ಒಂದು ಕೋಟಿ ರೂಪಾಯಿವರೆಗಿನ ಪರಿಹಾರದ ಪ್ರಕರಣಗಳನ್ನು ಜಿಲ್ಲಾ ಮಟ್ಟದಲ್ಲಿರುವ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಗೆ ದೂರು ಸಲ್ಲಿಸಬಹುದಾಗಿದೆ. ಹಿಂದೆ ಜಿಲ್ಲಾ ಮಟ್ಟದಲ್ಲಿ ₹ 20 ಲಕ್ಷದವರೆಗೆ ಮಾತ್ರ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿತ್ತು’ ಎಂದರು.