<p><strong>ಕಲಬುರಗಿ</strong>: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಗರದಲ್ಲಿರುವ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 296 ಪ್ರಕರಣಗಳು ಇತ್ಯರ್ಥಗೊಂಡಿವೆ. ಒಟ್ಟಾರೆ ₹6.64 ಕೋಟಿ ಪರಿಹಾರ ಮೊತ್ತ ಮಂಜೂರಿಗೆ ಸೂಚಿಸಲಾಗಿದೆ.</p><p>ಲೋಕ ಅದಾಲತ್ನಲ್ಲಿ ಮೋಟಾರು ವಾಹನ ವಿಮೆ, ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.</p><p>ಕಲಬುರಗಿಯಲ್ಲಿ ಮೂರು ಪೀಠಗಳಲ್ಲಿ ಲೋಕ ಅದಾಲತ್ ನಡೆಸಲಾಯಿತು. ನ್ಯಾಯಮೂರ್ತಿ ರವಿ.ವಿ.ಹೊಸಮನಿ, ನ್ಯಾಯಮೂರ್ತಿ ವಿ.ಶ್ರೀಶಾನಂದ ಹಾಗೂ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರು ನೂರಾರು ಅರ್ಜಿಗಳ ವಿಚಾರಣೆ ನಡೆಸಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ವಿಲೇವಾರಿ<br>ಮಾಡಿದರು.</p><p>ಸಂಧಾನಕಾರರಾಗಿ ಸುಧೀರಸಿಂಗ್ ಆರ್.ವಿಜಾಪುರ, ಶರಣಗೌಡ ವಿ.ಪಾಟೀಲ, ವಿಜಯಾ ಎ.ಪಾಟೀಲ ಅವರು ಕಾರ್ಯನಿರ್ವಹಿಸಿದರು. ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠದ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಬಸವರಾಜ ಚೆಂಗಟಿ ಉಪಸ್ಥಿತರಿದ್ದರು.</p><p>ಸರ್ಕಾರಿ ವಕೀಲರು, ಪ್ರಕರಣಗಳ ಕಕ್ಷಿದಾರರು, ಅವರ ಪರ ವಕೀಲರು ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.</p><p><strong>‘ಪ್ರೀತಿ ವಿಶ್ವಾಸದಿಂದ ಜೀವನ ನಡೆಸಿರಿ’</strong></p><p><strong>ಚಿಂಚೋಳಿ:</strong> ‘ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆಯುವುದನ್ನು ಬಿಟ್ಟು ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಯವ ಮೂಲಕ ಪ್ರೀತಿ ವಿಶ್ವಾಸದಿಂದ ಜೀವನ ನಡೆಸಬೇಕು’ ಎಂದು ನ್ಯಾಯಾಧೀಶ ದತ್ತಕುಮಾರ ಜವಳಕರ ತಿಳಿಸಿದರು.</p><p>ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ನಡೆಸಿದ ‘ರಾಷ್ಟ್ರೀಯ ಲೋಕ ಅದಾಲತ್’ನಲ್ಲಿ ಮಾತನಾಡಿದರು.</p><p>‘ಸಾರ್ವಜನಿಕರು, ಅಗತ್ಯ ನಾಗರಿಕ ಕಾನೂನುಗಳನ್ನು ತಿಳಿದುಕೊಳ್ಳಬೇಕು. ಮಕ್ಕಳ ಜನನ ಪ್ರಮಾಣ ಪತ್ರ ಅವಶ್ಯವಾಗಿದ್ದು, ಎಲ್ಲರೂ ತಮ್ಮ ಮಕ್ಕಳ ಜನನ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಬೇಕು. ಮುಂದೆ ಅಗತ್ಯವಿದ್ದಾಗ ಪ್ರಮಾಣಪತ್ರ ಬೇಕೆಂದರೆ ಸಿಗುವುದಿಲ್ಲ. ಮುಂಚಿತವಾಗಿಯೇ ಪಡೆದುಕೊಂಡರೆ ಸಮಸ್ಯೆ ಆಗುವುದಿಲ್ಲ’ ಎಂದು ಹೇಳಿದರು.</p><p>ವಕೀಲರ ಸಂಘದ ಅಧ್ಯಕ್ಷ ಶ್ರೀಮಂತ ಕಟ್ಟಿಮನಿ, ಉಪಾಧ್ಯಕ್ಷ ಜಗನ್ನಾಥ ಗಂಜಗಿರಿ, ವಕೀಲ ರವೀಂದ್ರ ಹೂವಿನಭಾವಿ, ಅಭಿಯೋಜಕ ಶಾಂತಕುಮಾರ ಪಾಟೀಲ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನಗರದಲ್ಲಿರುವ ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 296 ಪ್ರಕರಣಗಳು ಇತ್ಯರ್ಥಗೊಂಡಿವೆ. ಒಟ್ಟಾರೆ ₹6.64 ಕೋಟಿ ಪರಿಹಾರ ಮೊತ್ತ ಮಂಜೂರಿಗೆ ಸೂಚಿಸಲಾಗಿದೆ.</p><p>ಲೋಕ ಅದಾಲತ್ನಲ್ಲಿ ಮೋಟಾರು ವಾಹನ ವಿಮೆ, ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.</p><p>ಕಲಬುರಗಿಯಲ್ಲಿ ಮೂರು ಪೀಠಗಳಲ್ಲಿ ಲೋಕ ಅದಾಲತ್ ನಡೆಸಲಾಯಿತು. ನ್ಯಾಯಮೂರ್ತಿ ರವಿ.ವಿ.ಹೊಸಮನಿ, ನ್ಯಾಯಮೂರ್ತಿ ವಿ.ಶ್ರೀಶಾನಂದ ಹಾಗೂ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರು ನೂರಾರು ಅರ್ಜಿಗಳ ವಿಚಾರಣೆ ನಡೆಸಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ವಿಲೇವಾರಿ<br>ಮಾಡಿದರು.</p><p>ಸಂಧಾನಕಾರರಾಗಿ ಸುಧೀರಸಿಂಗ್ ಆರ್.ವಿಜಾಪುರ, ಶರಣಗೌಡ ವಿ.ಪಾಟೀಲ, ವಿಜಯಾ ಎ.ಪಾಟೀಲ ಅವರು ಕಾರ್ಯನಿರ್ವಹಿಸಿದರು. ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠದ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಬಸವರಾಜ ಚೆಂಗಟಿ ಉಪಸ್ಥಿತರಿದ್ದರು.</p><p>ಸರ್ಕಾರಿ ವಕೀಲರು, ಪ್ರಕರಣಗಳ ಕಕ್ಷಿದಾರರು, ಅವರ ಪರ ವಕೀಲರು ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಪಾಲ್ಗೊಂಡಿದ್ದರು.</p><p><strong>‘ಪ್ರೀತಿ ವಿಶ್ವಾಸದಿಂದ ಜೀವನ ನಡೆಸಿರಿ’</strong></p><p><strong>ಚಿಂಚೋಳಿ:</strong> ‘ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆಯುವುದನ್ನು ಬಿಟ್ಟು ರಾಜಿ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಯವ ಮೂಲಕ ಪ್ರೀತಿ ವಿಶ್ವಾಸದಿಂದ ಜೀವನ ನಡೆಸಬೇಕು’ ಎಂದು ನ್ಯಾಯಾಧೀಶ ದತ್ತಕುಮಾರ ಜವಳಕರ ತಿಳಿಸಿದರು.</p><p>ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಶನಿವಾರ ತಾಲ್ಲೂಕು ಕಾನೂನು ಸೇವಾ ಸಮಿತಿ ನಡೆಸಿದ ‘ರಾಷ್ಟ್ರೀಯ ಲೋಕ ಅದಾಲತ್’ನಲ್ಲಿ ಮಾತನಾಡಿದರು.</p><p>‘ಸಾರ್ವಜನಿಕರು, ಅಗತ್ಯ ನಾಗರಿಕ ಕಾನೂನುಗಳನ್ನು ತಿಳಿದುಕೊಳ್ಳಬೇಕು. ಮಕ್ಕಳ ಜನನ ಪ್ರಮಾಣ ಪತ್ರ ಅವಶ್ಯವಾಗಿದ್ದು, ಎಲ್ಲರೂ ತಮ್ಮ ಮಕ್ಕಳ ಜನನ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಬೇಕು. ಮುಂದೆ ಅಗತ್ಯವಿದ್ದಾಗ ಪ್ರಮಾಣಪತ್ರ ಬೇಕೆಂದರೆ ಸಿಗುವುದಿಲ್ಲ. ಮುಂಚಿತವಾಗಿಯೇ ಪಡೆದುಕೊಂಡರೆ ಸಮಸ್ಯೆ ಆಗುವುದಿಲ್ಲ’ ಎಂದು ಹೇಳಿದರು.</p><p>ವಕೀಲರ ಸಂಘದ ಅಧ್ಯಕ್ಷ ಶ್ರೀಮಂತ ಕಟ್ಟಿಮನಿ, ಉಪಾಧ್ಯಕ್ಷ ಜಗನ್ನಾಥ ಗಂಜಗಿರಿ, ವಕೀಲ ರವೀಂದ್ರ ಹೂವಿನಭಾವಿ, ಅಭಿಯೋಜಕ ಶಾಂತಕುಮಾರ ಪಾಟೀಲ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>