<p><strong>ಕಲಬುರಗಿ:</strong> ದೇಶದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ನಗರದಲ್ಲಿ ಶುಕ್ರವಾರ 'ಏಕತಾ ನಡಿಗೆ' ಓಟ ನಡೆಯಿತು.</p>.ಸರ್ದಾರ್ ಪಟೇಲ್ ವ್ಯಕ್ತಿತ್ವ ಪರಿಚಯಿಸಲು ಬಿಜೆಪಿಯಿಂದ 'ಏಕತಾ ನಡಿಗೆ'.<p>ನಗರದ ಸೂಪರ್ ಮಾರ್ಕೆಟ್ ನಲ್ಲಿ ಏಕತಾ ನಡಿಗೆಗೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಅವರು ಪ್ರಮಾಣ ವಚನ ಬೋಧಿಸಿ, ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸಾಥ್ ನೀಡಿದರು.</p><p>ಬಳಿಕ ಪೊಲೀಸರು, ಎನ್.ಸಿ.ಸಿ ಕೆಡೆಟ್ ಗಳು, ಕ್ರೀಡಾವಸತಿ ಶಾಲೆಗಳ ವಿಧ್ಯಾರ್ಥಿಗಳು, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಏಕತಾ ನಡಿಗೆಯಲ್ಲಿ ಹೆಜ್ಜೆ ಹಾಕಿದರು.</p> .ಅಂತರರಾಷ್ಟ್ರೀಯ ಯೋಗ ದಿನ: ಕಲಬುರಗಿಯಲ್ಲಿ ಯೋಗ ಜಾಗೃತಿ ನಡಿಗೆ.<p>ಸೂಪರ್ ಮಾರ್ಕೆಟ್ ನಿಂದ ಆರಂಭವಾದ ನಡಿಗೆಯು ಬ್ರಹ್ಮಪುರ ಪೊಲೀಸ್ ಠಾಣೆ, ಜಗತ್ ವೃತ್ತ, ಅನ್ನಪೂರ್ಣ ಕ್ರಾಸ್, ಲಾಹೋಟಿ ಪೆಟ್ರೋಲ್ ಬಂಕ್, ಜಿಲ್ಲಾಧಿಕಾರಿ ಕಚೇರಿ ಎದುರಿನಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ ತಲುಪಿ ನಡಿಗೆ ಸಂಪನ್ನಗೊಂಡಿತು.</p><p>ಡಿಸಿಪಿ ಕನಿಕಾ ಸಿಕ್ರಿವಾಲ್, ಡಿಸಿಪಿ ಪ್ರವೀಣ ನಾಯಕ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣವರ ಸೇರಿದಂತೆ ವಿವಿಧ ಠಾಣೆಗಳ ಪೊಲೀಸರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.ಚನ್ನಮ್ಮನ ಕಿತ್ತೂರು | ಪೊಲೀಸರಿಂದ ಏಕತಾ ನಡಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ದೇಶದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ನಗರದಲ್ಲಿ ಶುಕ್ರವಾರ 'ಏಕತಾ ನಡಿಗೆ' ಓಟ ನಡೆಯಿತು.</p>.ಸರ್ದಾರ್ ಪಟೇಲ್ ವ್ಯಕ್ತಿತ್ವ ಪರಿಚಯಿಸಲು ಬಿಜೆಪಿಯಿಂದ 'ಏಕತಾ ನಡಿಗೆ'.<p>ನಗರದ ಸೂಪರ್ ಮಾರ್ಕೆಟ್ ನಲ್ಲಿ ಏಕತಾ ನಡಿಗೆಗೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಅವರು ಪ್ರಮಾಣ ವಚನ ಬೋಧಿಸಿ, ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸುಲು ಸಾಥ್ ನೀಡಿದರು.</p><p>ಬಳಿಕ ಪೊಲೀಸರು, ಎನ್.ಸಿ.ಸಿ ಕೆಡೆಟ್ ಗಳು, ಕ್ರೀಡಾವಸತಿ ಶಾಲೆಗಳ ವಿಧ್ಯಾರ್ಥಿಗಳು, ಸ್ಕೌಟ್ಸ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳು ಏಕತಾ ನಡಿಗೆಯಲ್ಲಿ ಹೆಜ್ಜೆ ಹಾಕಿದರು.</p> .ಅಂತರರಾಷ್ಟ್ರೀಯ ಯೋಗ ದಿನ: ಕಲಬುರಗಿಯಲ್ಲಿ ಯೋಗ ಜಾಗೃತಿ ನಡಿಗೆ.<p>ಸೂಪರ್ ಮಾರ್ಕೆಟ್ ನಿಂದ ಆರಂಭವಾದ ನಡಿಗೆಯು ಬ್ರಹ್ಮಪುರ ಪೊಲೀಸ್ ಠಾಣೆ, ಜಗತ್ ವೃತ್ತ, ಅನ್ನಪೂರ್ಣ ಕ್ರಾಸ್, ಲಾಹೋಟಿ ಪೆಟ್ರೋಲ್ ಬಂಕ್, ಜಿಲ್ಲಾಧಿಕಾರಿ ಕಚೇರಿ ಎದುರಿನಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ ತಲುಪಿ ನಡಿಗೆ ಸಂಪನ್ನಗೊಂಡಿತು.</p><p>ಡಿಸಿಪಿ ಕನಿಕಾ ಸಿಕ್ರಿವಾಲ್, ಡಿಸಿಪಿ ಪ್ರವೀಣ ನಾಯಕ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣವರ ಸೇರಿದಂತೆ ವಿವಿಧ ಠಾಣೆಗಳ ಪೊಲೀಸರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.ಚನ್ನಮ್ಮನ ಕಿತ್ತೂರು | ಪೊಲೀಸರಿಂದ ಏಕತಾ ನಡಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>