<p><strong>ಅಫಜಲಪುರ</strong>: ಬದಲಾವಣೆ ತರಲು ಸಮರ್ಥನೆಂದು ಭರವಸೆ ನೀಡುವ ವ್ಯಕ್ತಿಯನ್ನು ತನ್ನ ನಾಯಕನನ್ನಾಗಿ ಆಯ್ಕೆ ಮಾಡುವ ಹಕ್ಕನ್ನು ಎಲ್ಲರಿಗೂ ನೀಡಲಾಗಿದೆ. ನಾವು ಮುಂದೆ ಬಂದು ಸರಿಯಾದ ನಾಯಕನನ್ನು ಆಯ್ಕೆ ಮಾಡದಿದ್ದರೆ ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂದು ಉಪನ್ಯಾಸಕ ಸತೀಶ ನಿಲಂಗೆ ತಿಳಿಸಿದರು.</p>.<p>ಇಲ್ಲಿನ ವಿರೇಂದ್ರ ಪಾಟೀಲ ಕಲಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾನ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮೂಲಸೌಕರ್ಯಗಳ ದೊಡ್ಡ ಯೋಜನೆಗಳು ಮತ್ತು ಹಲವಾರು ವಿಷಯಗಳನ್ನು ನಿರ್ಧರಿಸುವ ದೇಶದ ನಾಯಕ, ಮೂಲ ಸೌಕರ್ಯ ವ್ಯವಸ್ಥೆಯನ್ನು ಸರಿಯಾಗಿ ಅಭಿವೃದ್ಧಿಪಡಿಸದಿದ್ದರೆ ಅದರಿಂದ ಹಲವಾರು ಸಮಸ್ಯೆಗಳು ಉದ್ಭವಗೊಳ್ಳುತ್ತವೆ ಎಂದರು.</p>.<p>ಪ್ರಾಚಾರ್ಯ ಮಲ್ಲಿಕಾರ್ಜುನಯ್ಯ ಗಣಾಚಾರಿ ಮಾತನಾಡಿ, ಚುನಾವಣಾ ಆಯೋಗವು ಪ್ರತಿ 5 ವರ್ಷಗಳಿಗೊಮ್ಮೆ ಮತ್ತು ಚುನಾವಣೆಯ ಮೊದಲು ಮತದಾರರ ಪಟ್ಟಿಯನ್ನು ಪರಿಷ್ಕರಿಸುತ್ತದೆ. ಮತದಾನದ ಸಮಯದಲ್ಲಿ, ವೋಟರ್ ಐಡಿಯನ್ನು ಕೊಂಡೊಯ್ಯುವ ಅಗತ್ಯವಿಲ್ಲ, ನಿಮ್ಮ ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಒಯ್ಯಬಹುದು ಎಂದು ತಿಳಿಸಿದರು.</p>.<p>ಉಪನ್ಯಾಸಕ ಕೆ. ನಾರಾಯಣ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕರಾದ ಡಾ.ರಾಜೇಶ್ ಆಲಮೇಲಕರ, ಎಚ್.ಬಿ.ಕೊಳೆಕರ, ಬಿ.ಎಚ್.ಬಿರಾದಾರ, ಅರವಿಂದ ಜೋಶಿ, ರಮೇಶ್, ಪವನಕುಮಾರ ಇದ್ದರು.</p>.<p>ಉಪನ್ಯಾಸಕ ಎಸ್.ಎನ್.ಗುಡಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ</strong>: ಬದಲಾವಣೆ ತರಲು ಸಮರ್ಥನೆಂದು ಭರವಸೆ ನೀಡುವ ವ್ಯಕ್ತಿಯನ್ನು ತನ್ನ ನಾಯಕನನ್ನಾಗಿ ಆಯ್ಕೆ ಮಾಡುವ ಹಕ್ಕನ್ನು ಎಲ್ಲರಿಗೂ ನೀಡಲಾಗಿದೆ. ನಾವು ಮುಂದೆ ಬಂದು ಸರಿಯಾದ ನಾಯಕನನ್ನು ಆಯ್ಕೆ ಮಾಡದಿದ್ದರೆ ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಅಡ್ಡಿಯಾಗುತ್ತದೆ ಎಂದು ಉಪನ್ಯಾಸಕ ಸತೀಶ ನಿಲಂಗೆ ತಿಳಿಸಿದರು.</p>.<p>ಇಲ್ಲಿನ ವಿರೇಂದ್ರ ಪಾಟೀಲ ಕಲಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಂಗಳವಾರ ಏರ್ಪಡಿಸಿದ್ದ ರಾಷ್ಟ್ರೀಯ ಮತದಾನ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮೂಲಸೌಕರ್ಯಗಳ ದೊಡ್ಡ ಯೋಜನೆಗಳು ಮತ್ತು ಹಲವಾರು ವಿಷಯಗಳನ್ನು ನಿರ್ಧರಿಸುವ ದೇಶದ ನಾಯಕ, ಮೂಲ ಸೌಕರ್ಯ ವ್ಯವಸ್ಥೆಯನ್ನು ಸರಿಯಾಗಿ ಅಭಿವೃದ್ಧಿಪಡಿಸದಿದ್ದರೆ ಅದರಿಂದ ಹಲವಾರು ಸಮಸ್ಯೆಗಳು ಉದ್ಭವಗೊಳ್ಳುತ್ತವೆ ಎಂದರು.</p>.<p>ಪ್ರಾಚಾರ್ಯ ಮಲ್ಲಿಕಾರ್ಜುನಯ್ಯ ಗಣಾಚಾರಿ ಮಾತನಾಡಿ, ಚುನಾವಣಾ ಆಯೋಗವು ಪ್ರತಿ 5 ವರ್ಷಗಳಿಗೊಮ್ಮೆ ಮತ್ತು ಚುನಾವಣೆಯ ಮೊದಲು ಮತದಾರರ ಪಟ್ಟಿಯನ್ನು ಪರಿಷ್ಕರಿಸುತ್ತದೆ. ಮತದಾನದ ಸಮಯದಲ್ಲಿ, ವೋಟರ್ ಐಡಿಯನ್ನು ಕೊಂಡೊಯ್ಯುವ ಅಗತ್ಯವಿಲ್ಲ, ನಿಮ್ಮ ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಆಧಾರ್ ಕಾರ್ಡ್ ಒಯ್ಯಬಹುದು ಎಂದು ತಿಳಿಸಿದರು.</p>.<p>ಉಪನ್ಯಾಸಕ ಕೆ. ನಾರಾಯಣ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕರಾದ ಡಾ.ರಾಜೇಶ್ ಆಲಮೇಲಕರ, ಎಚ್.ಬಿ.ಕೊಳೆಕರ, ಬಿ.ಎಚ್.ಬಿರಾದಾರ, ಅರವಿಂದ ಜೋಶಿ, ರಮೇಶ್, ಪವನಕುಮಾರ ಇದ್ದರು.</p>.<p>ಉಪನ್ಯಾಸಕ ಎಸ್.ಎನ್.ಗುಡಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>