<p><strong>ಕಲಬುರ್ಗಿ:</strong> ಖಾಜಿ ಕಚೇರಿಯಲ್ಲಿ ಮುಸ್ಲಿಂ ಸಮಾಜಕ್ಕೆ ಮದುವೆಗೆ ಅನುಮತಿ ಕೊಡಬೇಕು ಎಂದು ಒತ್ತಾಯಿಸಿ ನಯಾ ಸವೇರಾ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನಾ ಪ್ರದರ್ಶನ ಮಾಡಿದರು.</p>.<p>‘ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಮನೆಯಲ್ಲಿ ಮದುವೆ ಸಮಾರಂಭ ಮಾಡುವಂತಿಲ್ಲ ಎಂಬ ಸರ್ಕಾರದ ಆದೇಶವನ್ನು ಹಾಗೂ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ನೋಂದಣಿ ಮಾಡುವುದನ್ನು ಸ್ವಾಗತಿಸುತ್ತೇವೆ. ಆದಾಗ್ಯೂ, ಮುಸ್ಲಿಂ ಸಮುದಾಯಕ್ಕೆ ಆ ರೀತಿ ಮಾಡುವುದಕ್ಕೆ ಆಗುವುದಿಲ್ಲ. ಅದಕ್ಕೆ ಮುಸ್ಲಿಂ ವೈಯಕ್ತಿಕ ಕಾನೂನು ಒಪ್ಪುವುದಿಲ್ಲ’ ಎಂದು ಸಂಘಟನೆ ಅಧ್ಯಕ್ಷ ಮೋದಿನ್ ಪಟೇಲ್ ಅಣಬಿ ತಿಳಿಸಿದರು.</p>.<p>ಇಸ್ಲಾಂನಲ್ಲಿ ನಿಖಾಹ್ ಆಗಬೇಕಾದರೆ ಅದಕ್ಕಾಗಿ ಖಾಜಿ ಕಚೇರಿಯಲ್ಲಿ ಮದುವೆ ಮಾಡಿಸುವುದಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿದ ಅವರು, ಮದುವೆಯು ಅವರವರ ಧರ್ಮಗಳ ಪ್ರಕಾರ ಜರುಗುತ್ತವೆ. ಹಾಗಾಗಿ ಮುಸ್ಲಿಂ ಸಮುದಾಯಕ್ಕೆ ಖಾಜಿ ಕಚೇರಿಯಲ್ಲಿ ಮದುವೆಗೆ ಅನುಮತಿ ಕೊಡಬೇಕು ಎಂದು ಆಗ್ರಹಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನೀಲಕಂಠರಾವ ಮೂಲಗೆ, ಖಾಜಿ ಹಮೀದ್ ಫೈಸಲ್, ಚೇತನ ಗೋನಾಯಕ, ಶರಣ ಪಾಟೀಲ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಖಾಜಿ ಕಚೇರಿಯಲ್ಲಿ ಮುಸ್ಲಿಂ ಸಮಾಜಕ್ಕೆ ಮದುವೆಗೆ ಅನುಮತಿ ಕೊಡಬೇಕು ಎಂದು ಒತ್ತಾಯಿಸಿ ನಯಾ ಸವೇರಾ ಸಂಘಟನೆ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಶುಕ್ರವಾರ ಪ್ರತಿಭಟನಾ ಪ್ರದರ್ಶನ ಮಾಡಿದರು.</p>.<p>‘ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಮನೆಯಲ್ಲಿ ಮದುವೆ ಸಮಾರಂಭ ಮಾಡುವಂತಿಲ್ಲ ಎಂಬ ಸರ್ಕಾರದ ಆದೇಶವನ್ನು ಹಾಗೂ ಉಪನೋಂದಣಾಧಿಕಾರಿ ಕಚೇರಿಯಲ್ಲಿ ಮದುವೆ ನೋಂದಣಿ ಮಾಡುವುದನ್ನು ಸ್ವಾಗತಿಸುತ್ತೇವೆ. ಆದಾಗ್ಯೂ, ಮುಸ್ಲಿಂ ಸಮುದಾಯಕ್ಕೆ ಆ ರೀತಿ ಮಾಡುವುದಕ್ಕೆ ಆಗುವುದಿಲ್ಲ. ಅದಕ್ಕೆ ಮುಸ್ಲಿಂ ವೈಯಕ್ತಿಕ ಕಾನೂನು ಒಪ್ಪುವುದಿಲ್ಲ’ ಎಂದು ಸಂಘಟನೆ ಅಧ್ಯಕ್ಷ ಮೋದಿನ್ ಪಟೇಲ್ ಅಣಬಿ ತಿಳಿಸಿದರು.</p>.<p>ಇಸ್ಲಾಂನಲ್ಲಿ ನಿಖಾಹ್ ಆಗಬೇಕಾದರೆ ಅದಕ್ಕಾಗಿ ಖಾಜಿ ಕಚೇರಿಯಲ್ಲಿ ಮದುವೆ ಮಾಡಿಸುವುದಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿದ ಅವರು, ಮದುವೆಯು ಅವರವರ ಧರ್ಮಗಳ ಪ್ರಕಾರ ಜರುಗುತ್ತವೆ. ಹಾಗಾಗಿ ಮುಸ್ಲಿಂ ಸಮುದಾಯಕ್ಕೆ ಖಾಜಿ ಕಚೇರಿಯಲ್ಲಿ ಮದುವೆಗೆ ಅನುಮತಿ ಕೊಡಬೇಕು ಎಂದು ಆಗ್ರಹಿಸಿದರು.</p>.<p>ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನೀಲಕಂಠರಾವ ಮೂಲಗೆ, ಖಾಜಿ ಹಮೀದ್ ಫೈಸಲ್, ಚೇತನ ಗೋನಾಯಕ, ಶರಣ ಪಾಟೀಲ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>