ಈ ಭಾಗದ ದಲಿತ ಮುಖಂಡ ಭೀಮರಾವ್ ಗೌರ ಅವರು ಶುದ್ಧ ಕುಡಿಯವ ನೀರಿನ ಯೋಜನೆ ಕುರಿತು ಮಾಹಿತಿ ನೀಡಿ, ‘ಈ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸಿ ನೀರು ಪೂರೈಸಬೇಕು ಎಂದು ಹಲವಾರು ಬಾರಿ ಹೋರಾಟ ಮಾಡಿದ್ದೇನೆ. ಆದರೂ ಸಹ ಯಾರೂ ಏನೂ ಮಾಡುತ್ತಿಲ್ಲ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು, ಈ ಭಾಗದ ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಲ ನಿರ್ಮಲ ಯೋಜನೆ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.