<p><strong>ಕಲಬುರ್ಗಿ: </strong>ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ 52 ಮಂದಿಯ ವಿರುದ್ಧ 22 ಪ್ರಕರಣಗಳನ್ನು ದಾಖಲಿಸಲಾಗಿದೆ. ಇವರಲ್ಲಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.</p>.<p>ಬಂಧಿತ ಏಳೂ ಜನರ ವಿರುದ್ಧ ವಾಹನ ಜಖಂಗೊಳಿಸಿದ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಇನ್ನೊಬ್ಬರು ತಲೆಮರೆಸಿಕೊಂಡಿದ್ದಾರೆ.</p>.<p>ಕರ್ತವ್ಯಕ್ಕೆ ಅಡ್ಡಿಪಡಿಸಿದ 36 ಮಂದಿ, ಕೆಸ್ಮಾ ಕಾಯ್ದೆ ಅಡಿ 7, ವಾಟ್ಸ್ಆ್ಯಪ್ ಮೂಲಕ ಪ್ರಚೋದನೆ ನೀಡಿದ ಒಬ್ಬರ ವಿರುದ್ಧ ವಿವಿಧ ಠಾಣೆಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡುವ ಉದ್ದೇಶದಿಂದ 135 ಸಿಬ್ಬಂದಿಯನ್ನು ಬೇರೆಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ. ಸಂಸ್ಥೆ ವ್ಯಾಪ್ತಿಗೆ ಬರುವ 9 ವಿಭಾಗಗಳು ಸೇರಿ ಈವರೆಗೆ 55 ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದೂ ತಿಳಿಸಿದ್ದಾರೆ.</p>.<p>ಇದರ ಮಧ್ಯೆ, ಶುಕ್ರವಾರ ಮತ್ತಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದು, 1,014 ಬಸ್ ಓಡಿಸಲಾಗಿದೆ. 323 ಖಾಸಗಿ ವಾಹನ, 179 ನೆರೆ ರಾಜ್ಯಗಳ ಸರ್ಕಾರಿ ಬಸ್ ಹಾಗೂ 2,094 ಇತರೆ ವಾಹನಗಳನ್ನು ಪ್ರಯಾಣಿಕರಿಗಾಗಿ ಓಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಸಾರಿಗೆ ನೌಕರರ ಮುಷ್ಕರಕ್ಕೆ ಪ್ರಚೋದನೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ 52 ಮಂದಿಯ ವಿರುದ್ಧ 22 ಪ್ರಕರಣಗಳನ್ನು ದಾಖಲಿಸಲಾಗಿದೆ. ಇವರಲ್ಲಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.</p>.<p>ಬಂಧಿತ ಏಳೂ ಜನರ ವಿರುದ್ಧ ವಾಹನ ಜಖಂಗೊಳಿಸಿದ ಪ್ರಕರಣ ದಾಖಲಿಸಲಾಗಿದೆ. ಇದರಲ್ಲಿ ಇನ್ನೊಬ್ಬರು ತಲೆಮರೆಸಿಕೊಂಡಿದ್ದಾರೆ.</p>.<p>ಕರ್ತವ್ಯಕ್ಕೆ ಅಡ್ಡಿಪಡಿಸಿದ 36 ಮಂದಿ, ಕೆಸ್ಮಾ ಕಾಯ್ದೆ ಅಡಿ 7, ವಾಟ್ಸ್ಆ್ಯಪ್ ಮೂಲಕ ಪ್ರಚೋದನೆ ನೀಡಿದ ಒಬ್ಬರ ವಿರುದ್ಧ ವಿವಿಧ ಠಾಣೆಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<p>ಸಾರ್ವಜನಿಕರಿಗೆ ಅಗತ್ಯ ಸೇವೆ ನೀಡುವ ಉದ್ದೇಶದಿಂದ 135 ಸಿಬ್ಬಂದಿಯನ್ನು ಬೇರೆಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಲಾಗಿದೆ. ಸಂಸ್ಥೆ ವ್ಯಾಪ್ತಿಗೆ ಬರುವ 9 ವಿಭಾಗಗಳು ಸೇರಿ ಈವರೆಗೆ 55 ಮಂದಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ ಎಂದೂ ತಿಳಿಸಿದ್ದಾರೆ.</p>.<p>ಇದರ ಮಧ್ಯೆ, ಶುಕ್ರವಾರ ಮತ್ತಷ್ಟು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದು, 1,014 ಬಸ್ ಓಡಿಸಲಾಗಿದೆ. 323 ಖಾಸಗಿ ವಾಹನ, 179 ನೆರೆ ರಾಜ್ಯಗಳ ಸರ್ಕಾರಿ ಬಸ್ ಹಾಗೂ 2,094 ಇತರೆ ವಾಹನಗಳನ್ನು ಪ್ರಯಾಣಿಕರಿಗಾಗಿ ಓಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>