<p><strong>ಕಲಬುರ್ಗಿ:</strong> ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನವೂ ಮುಂದುವರಿಯಿತು. ಇದರ ಮಧ್ಯೆ ಅಧಿಕಾರಿಗಳು ಹಲವು ಸಿಬ್ಬಂದಿಯ ಮನವೊಲಿಸಿದ್ದು, ಸುಮಾರು 270 ಬಸ್ಗಳು ಸಂಚರಿಸಿದವು.</p>.<p>ಕಳೆದ ಮೂರು ದಿನಗಳಿಂದ ಮುಷ್ಕರದಿಂದ ಬೇಸತ್ತಿದ್ದ ಪ್ರಯಾಣಿ ಕರು ಶನಿವಾರ ಬಸ್ ನಿಲ್ದಾಣಕ್ಕೆ ಬರಲಿಲ್ಲ. ಇದರಿಂದ ಇಡೀ ನಿಲ್ದಾಣದ ಒಳಗೆ ಕಡಿಮೆ ಸಂಖ್ಯೆಯ ಪ್ರಯಾಣಿಕರು ಮಾತ್ರ ಕಂಡುಬಂದರು. ಬಸ್ ನಿಲ್ದಾಣ ದಿಂದಲೇ ಹಲವು ಖಾಸಗಿ ಬಸ್ ಹಾಗೂ ಟೆಂಪೊಗಳ ಸಂಚಾರ ಮುಂದುವರಿದಿತ್ತು.</p>.<p>‘ಜನರಿಗೆ ತೊಂದರೆಯಾಗದಂತೆ ವಾಹನ ಓಡಿಸಲು 122 ಚಾಲನಾ ಮತ್ತು 27 ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 149 ಸಿಬ್ಬಂದಿಯ ಎರವಲು ಸೇವೆ ರದ್ದುಗೊಳಿಸಿ, ಮೂಲ ಹುದ್ದೆಯ ಕರ್ತವ್ಯಕ್ಕೆ ನಿಯೋಜಿಸಲಾಗಿದೆ’ ಎಂದು ಎನ್ಇಕೆ ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮರಾವ್ ತಿಳಿಸಿದ್ದಾರೆ.</p>.<p>ಮುಷ್ಕರದ ನಡುವೆಯೂ 358 ಖಾಸಗಿ ಬಸ್, 191 ಆಂಧ್ರಪ್ರದೇಶ ಮತ್ತು ತೆಲಂಗಾಣ ಸಾರಿಗೆ ಸಂಸ್ಥೆಯ ವಾಹನಗಳು ಹಾಗೂ 2757 ಇತರೆ ವಾಹನಗಳನ್ನು ಬಸ್ ನಿಲ್ದಾಣದ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.</p>.<p class="Subhead">₹ 4.5 ಕೋಟಿ ಆದಾಯ ಕೊರತೆ: ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ಪ್ರತಿದಿನ ₹ 4.5 ಕೋಟಿ ಆದಾಯದಲ್ಲಿ ಕೊರತೆಯಾಗಿದೆ. ಹೀಗಾಗಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಲ್ಲಿ ಎಂ.ಕೂರ್ಮರಾವ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಮುಷ್ಕರ ಶನಿವಾರ ನಾಲ್ಕನೇ ದಿನವೂ ಮುಂದುವರಿಯಿತು. ಇದರ ಮಧ್ಯೆ ಅಧಿಕಾರಿಗಳು ಹಲವು ಸಿಬ್ಬಂದಿಯ ಮನವೊಲಿಸಿದ್ದು, ಸುಮಾರು 270 ಬಸ್ಗಳು ಸಂಚರಿಸಿದವು.</p>.<p>ಕಳೆದ ಮೂರು ದಿನಗಳಿಂದ ಮುಷ್ಕರದಿಂದ ಬೇಸತ್ತಿದ್ದ ಪ್ರಯಾಣಿ ಕರು ಶನಿವಾರ ಬಸ್ ನಿಲ್ದಾಣಕ್ಕೆ ಬರಲಿಲ್ಲ. ಇದರಿಂದ ಇಡೀ ನಿಲ್ದಾಣದ ಒಳಗೆ ಕಡಿಮೆ ಸಂಖ್ಯೆಯ ಪ್ರಯಾಣಿಕರು ಮಾತ್ರ ಕಂಡುಬಂದರು. ಬಸ್ ನಿಲ್ದಾಣ ದಿಂದಲೇ ಹಲವು ಖಾಸಗಿ ಬಸ್ ಹಾಗೂ ಟೆಂಪೊಗಳ ಸಂಚಾರ ಮುಂದುವರಿದಿತ್ತು.</p>.<p>‘ಜನರಿಗೆ ತೊಂದರೆಯಾಗದಂತೆ ವಾಹನ ಓಡಿಸಲು 122 ಚಾಲನಾ ಮತ್ತು 27 ತಾಂತ್ರಿಕ ಸಿಬ್ಬಂದಿ ಸೇರಿದಂತೆ ಒಟ್ಟು 149 ಸಿಬ್ಬಂದಿಯ ಎರವಲು ಸೇವೆ ರದ್ದುಗೊಳಿಸಿ, ಮೂಲ ಹುದ್ದೆಯ ಕರ್ತವ್ಯಕ್ಕೆ ನಿಯೋಜಿಸಲಾಗಿದೆ’ ಎಂದು ಎನ್ಇಕೆ ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ಕೂರ್ಮರಾವ್ ತಿಳಿಸಿದ್ದಾರೆ.</p>.<p>ಮುಷ್ಕರದ ನಡುವೆಯೂ 358 ಖಾಸಗಿ ಬಸ್, 191 ಆಂಧ್ರಪ್ರದೇಶ ಮತ್ತು ತೆಲಂಗಾಣ ಸಾರಿಗೆ ಸಂಸ್ಥೆಯ ವಾಹನಗಳು ಹಾಗೂ 2757 ಇತರೆ ವಾಹನಗಳನ್ನು ಬಸ್ ನಿಲ್ದಾಣದ ಮೂಲಕ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.</p>.<p class="Subhead">₹ 4.5 ಕೋಟಿ ಆದಾಯ ಕೊರತೆ: ಸಾರಿಗೆ ನೌಕರರ ಮುಷ್ಕರದಿಂದ ಸಂಸ್ಥೆಗೆ ಪ್ರತಿದಿನ ₹ 4.5 ಕೋಟಿ ಆದಾಯದಲ್ಲಿ ಕೊರತೆಯಾಗಿದೆ. ಹೀಗಾಗಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಲ್ಲಿ ಎಂ.ಕೂರ್ಮರಾವ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>