<p><strong>ಕಲಬುರ್ಗಿ: </strong>‘ಪ್ರೇಮ ವಿವಾಹ ಮಾಡಿಕೊಂಡ ನಮಗೆ ಪಾಲಕರಿಂದ ಜೀವ ಬೆದರಿಕೆಯಿದ್ದು, ಸೂಕ್ತ ರಕ್ಷಣೆ ನೀಡಿ’ ಎಂದು ಕೋರಿ ನವದಂಪತಿ ಇಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಗುರುವಾರ ಮನವಿ ನೀಡಿದ್ದಾರೆ.</p>.<p>ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಯ್ಯಪ್ಪಸ್ವಾಮಿ ಹಾಗೂ ಕಲಬುರ್ಗಿಯ ಕಸ್ತೂರಿ ರಕ್ಷಣೆ ಕೋರಿದ ದಂಪತಿ. ಕಳೆದ ನವೆಂಬರ್ನಲ್ಲಿ ಇವರಿಬ್ಬರೂ ಮನೆಯವರ ವಿರೋಧದ ಮಧ್ಯೆಯೂ ಅಂತರ್ಜಾತಿ ವಿವಾಹವಾಗಿದ್ದಾರೆ.</p>.<p>ಇವರಿಬ್ಬರೂ ಮದುವೆಯಾದ ನಂತರ ಯುವತಿಯ ಪೋಷಕರುಕಲಬುರ್ಗಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಅಯ್ಯಪ್ಪಸ್ವಾಮಿ ಅವರ ತಂದೆ ಹಾಗೂ ತಾಯಿಯನ್ನು ಠಾಣೆಗೆ ಕರೆತಂದ ಪೊಲೀಸರು, ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಮಹಿಳಾ ಠಾಣೆಯ ಸಿಪಿಐ ಸಂಗಮೇಶ ಪಾಟೀಲ ಮತ್ತು ಕಾನ್ಸ್ಟೆಬಲ್ ನೆಹರೂ ಸಿಂಗ್ ಎಂಬುವರನ್ನು ಅಮಾನತು ಮಾಡಲಾಗಿತ್ತು.</p>.<p>ಹೈಕೋರ್ಟ್ ಎದುರು ಹಾಜರಾಗಿದ್ದ ನವವಿವಾಹಿತರಿಗೆ ಇಬ್ಬರೂ ವಯಸ್ಕರಾದ್ದರಿಂದ ಅವರ ಮದುವೆಯನ್ನು ಹೈಕೋರ್ಟ್ ಸಮ್ಮತಿಸಿತ್ತು.</p>.<p>‘ಪೊಲೀಸರು ಮತ್ತು ನನ್ನ ಪೋಷಕರಿಂದ ಕಿರುಕುಳ ಮುಂದುವರೆದಿದೆ. ದೂರವಾಣಿ ಕರೆ ಮಾಡಿ, ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸುತ್ತಿದ್ದಾರೆ. ರಕ್ಷಣೆ ನೀಡಬೇಕಾದ ಪೊಲೀಸರೇ ಹೆದರಿಸುತ್ತಿದ್ದಾರೆ. ನಮಗೆ ರಕ್ಷಣೆ ನೀಡಿ’ ಎಂದು ಎಂದು ಕಸ್ತೂರಿ ಅವರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ಪ್ರೇಮ ವಿವಾಹ ಮಾಡಿಕೊಂಡ ನಮಗೆ ಪಾಲಕರಿಂದ ಜೀವ ಬೆದರಿಕೆಯಿದ್ದು, ಸೂಕ್ತ ರಕ್ಷಣೆ ನೀಡಿ’ ಎಂದು ಕೋರಿ ನವದಂಪತಿ ಇಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಗುರುವಾರ ಮನವಿ ನೀಡಿದ್ದಾರೆ.</p>.<p>ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಯ್ಯಪ್ಪಸ್ವಾಮಿ ಹಾಗೂ ಕಲಬುರ್ಗಿಯ ಕಸ್ತೂರಿ ರಕ್ಷಣೆ ಕೋರಿದ ದಂಪತಿ. ಕಳೆದ ನವೆಂಬರ್ನಲ್ಲಿ ಇವರಿಬ್ಬರೂ ಮನೆಯವರ ವಿರೋಧದ ಮಧ್ಯೆಯೂ ಅಂತರ್ಜಾತಿ ವಿವಾಹವಾಗಿದ್ದಾರೆ.</p>.<p>ಇವರಿಬ್ಬರೂ ಮದುವೆಯಾದ ನಂತರ ಯುವತಿಯ ಪೋಷಕರುಕಲಬುರ್ಗಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದನ್ನು ಆಧರಿಸಿ ಅಯ್ಯಪ್ಪಸ್ವಾಮಿ ಅವರ ತಂದೆ ಹಾಗೂ ತಾಯಿಯನ್ನು ಠಾಣೆಗೆ ಕರೆತಂದ ಪೊಲೀಸರು, ಮನಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಮಹಿಳಾ ಠಾಣೆಯ ಸಿಪಿಐ ಸಂಗಮೇಶ ಪಾಟೀಲ ಮತ್ತು ಕಾನ್ಸ್ಟೆಬಲ್ ನೆಹರೂ ಸಿಂಗ್ ಎಂಬುವರನ್ನು ಅಮಾನತು ಮಾಡಲಾಗಿತ್ತು.</p>.<p>ಹೈಕೋರ್ಟ್ ಎದುರು ಹಾಜರಾಗಿದ್ದ ನವವಿವಾಹಿತರಿಗೆ ಇಬ್ಬರೂ ವಯಸ್ಕರಾದ್ದರಿಂದ ಅವರ ಮದುವೆಯನ್ನು ಹೈಕೋರ್ಟ್ ಸಮ್ಮತಿಸಿತ್ತು.</p>.<p>‘ಪೊಲೀಸರು ಮತ್ತು ನನ್ನ ಪೋಷಕರಿಂದ ಕಿರುಕುಳ ಮುಂದುವರೆದಿದೆ. ದೂರವಾಣಿ ಕರೆ ಮಾಡಿ, ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೆದರಿಸುತ್ತಿದ್ದಾರೆ. ರಕ್ಷಣೆ ನೀಡಬೇಕಾದ ಪೊಲೀಸರೇ ಹೆದರಿಸುತ್ತಿದ್ದಾರೆ. ನಮಗೆ ರಕ್ಷಣೆ ನೀಡಿ’ ಎಂದು ಎಂದು ಕಸ್ತೂರಿ ಅವರು ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>