2019ರ ಆಗಸ್ಟ್ನಲ್ಲಿ ಶರತ್ ಬಿ. ಅವರು ಕಲಬುರ್ಗಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಏಪ್ರಿಲ್ 28ರಂದು ಶರತ್ ಅವರನ್ನು ವರ್ಗಾವಣೆಗೊಳಿಸಿ ಕಿಶೋರ ವಿಕಾಸ್ ಸುರಳಕರ್ ಅವರನ್ನು ನೇಮಕ ಮಾಡಲಾಗಿತ್ತು. ಆದರೆ, ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದ ಸಂದರ್ಭದಲ್ಲಿ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದಕ್ಕೆ ಜಿಲ್ಲೆಯ ಜನತೆ ಹಾಗೂ ವಿರೋಧ ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದರಿಂದ ಅದೇ ದಿನ ವರ್ಗಾವಣೆ ಆದೇಶವನ್ನು ಸರ್ಕಾರ ಹಿಂದೆಗೆದುಕೊಂಡಿತ್ತು.