ನಗರಾಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಯೋಜನೆಗಳ ಕುರಿತು ಮಾತನಾಡಿದ ಕೆಕೆಆರ್ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ‘ನಗರದಲ್ಲಿ ಉದ್ಯಾನವನಗಳು ಸೂಕ್ತ ನಿರ್ವಹಣೆ ಇಲ್ಲದೇ ಹಾಳಾಗಿವೆ. ಅವುಗಳನ್ನು ಅಭಿವೃದ್ಧಿಪಡಿಸುವುದು ಪ್ರಾಧಿಕಾರದ ಆದ್ಯತೆಯಾಗಬೇಕು. ಜೊತೆಗೆ, ಕಣ್ಣಿ ಮಾರ್ಕೆಟ್ ಅಭಿವೃದ್ಧಿಗೆ ಹೀರಾಪುರದಲ್ಲಿ ಜಾಗ ಗುರುತಿಸಲಾಗಿದ್ದು, ಪ್ರಾಧಿಕಾರ ಹಾಗೂ ಎಪಿಎಂಸಿಗಳು ಜಂಟಿಯಾಗಿ ಮಾರುಕಟ್ಟೆಯನ್ನು ಅಭಿವೃದ್ಧಿಪಡಿಸುತ್ತಿವೆ. ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯಬಿದ್ದರೆ ಕೆಕೆಆರ್ಡಿಬಿಯಿಂದ ಅಗತ್ಯ ಅನುದಾನವನ್ನು ನೀಡಲಾಗುವುದು’ ಎಂದು ಭರವಸೆ ನೀಡಿದರು.