ಆಂಧ್ರಪ್ರದೇಶದವರಾದ 2004ನೇ ಬ್ಯಾಚಿನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಪ್ರಸಾದ್ ಪ್ರೊಬೇಷನರಿ ಅವಧಿಯನ್ನು ಕಲಬುರ್ಗಿ ಜಿಲ್ಲೆಯಲ್ಲಿ ಪೂರ್ಣಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಹಾಯಕ ಆಯುಕ್ತರಾಗಿ, ರಾಯಚೂರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಗದಗ, ಚಿತ್ರದುರ್ಗ, ಕೊಡಗು, ದಾವಣಗೆರೆ ಹಾಗೂ ಕಲಬುರ್ಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.