‘ಔರಾದ್ ಮಾರ್ಗವಾಗಿ ಬೀದರ್–ನಾಂದೇಡ ರೈಲ್ವೆ ಮಾರ್ಗದ ಅಂತಿಮ ಹಂತದ ಸರ್ವೆ ಮುಗಿದಿದ್ದು, ಕೆಲವು ದಿನಗಳಲ್ಲಿ ಕಾಮಗಾರಿ ಪ್ರಾರಂಭಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಬೀದರ್ನಿಂದ–ದೆಹಲಿಗೆ ರೈಲು ಓಡಿಸುವ ಹಾಗೂಬೀದರ್–ಕಲಬುರ್ಗಿ ರೈಲ್ವೆ ಮಾರ್ಗದ ವಿದ್ಯುದೀಕರಣ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವುದಾಗಿ ತಿಳಿಸಿರುತ್ತಾರೆ ಎಂದು ಸಂಸದ ಖೂಬಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.