ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಬಿಜೆಪಿಯ ಬೂತ್ ವಿಜಯ ಅಭಿಯಾನದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತೊಗರಿ ನೆಟೆರೋಗ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆಯಾಗಿದೆ. ಆದರೆ ಯಾವ ರೀತಿ ಪರಿಹಾರ ನೀಡಬೇಕು ಎಂಬುದು ಅಂತಿಮವಾಗಿಲ್ಲ. ವಿಶೇಷ ಪ್ಯಾಕೇಜ್ ಕೊಡಬೇಕೋ, ಪರಿಹಾರ ನೀಡಬೇಕೆಂಬುದನ್ನು ಇನ್ನೊಂದು ಸುತ್ತಿನ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.