<p><strong>ಕಲಬುರಗಿ:</strong> ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದಲ್ಲಿ ತೋರಿದ ಸುಧಾರಣೆಗಾಗಿ ಜಿಲ್ಲೆಯ ಕಾಳಗಿ ತಾಲ್ಲೂಕು ದಕ್ಷಿಣ ಭಾರತದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.</p>.<p>ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲ್ಲೂಕುಗಳ ಶ್ರೇಯಾಂಕ ಪಟ್ಟಿಯ ದಕ್ಷಿಣ ಭಾರತ ವಲಯದಡಿ ಆಂಧ್ರಪ್ರದೇಶದ ಭಾಮಿನಿ ತಾಲ್ಲೂಕು ಪ್ರಥಮ ಸ್ಥಾನ ಗಳಿಸಿದರೆ, ಕಾಳಗಿ ಎರಡನೇ ಶ್ರೇಯಾಂಕ ಪಡೆಯಲು ಸಫಲವಾಗಿದೆ.</p>.<p>ಶಿಕ್ಷಣ, ಆರೋಗ್ಯ, ಕೌಶಲ, ಮಹಿಳಾ ಮತ್ತು ಮಕ್ಕಳು, ಕೃಷಿ ಸೇರಿದಂತೆ ಜನರ ಜೀವನ ಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಕಾಳಗಿಯಲ್ಲಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ಎರಡನೇ ಶ್ರೇಯಾಂಕ ಲಭಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>ಮಹತ್ವಾಕಾಂಕ್ಷೆ ತಾಲ್ಲೂಕುಗಳ ಪಟ್ಟಿಯಲ್ಲಿ ಅಫಜಲಪುರ ಹಾಗೂ ಶಹಾಬಾದ್ ಗುರುತಿಸಲಾಗಿತ್ತು. ಆದರೆ, ಕಾಳಗಿಗೆ ಈ ಶ್ರೇಯಾಂಕ ದೊರೆತಿದೆ. ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳನ್ನು ಆಹ್ವಾನಿಸಿ, ಪ್ರಮಾಣ ಪತ್ರ ನೀಡಲಾಗುವುದು. ತಾಲ್ಲೂಕಿಗೆ ಹೆಚ್ಚಿನ ಅನುದಾನವೂ ಲಭಿಸಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದಲ್ಲಿ ತೋರಿದ ಸುಧಾರಣೆಗಾಗಿ ಜಿಲ್ಲೆಯ ಕಾಳಗಿ ತಾಲ್ಲೂಕು ದಕ್ಷಿಣ ಭಾರತದಲ್ಲಿ ದ್ವಿತೀಯ ಸ್ಥಾನ ಪಡೆದಿದೆ.</p>.<p>ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲ್ಲೂಕುಗಳ ಶ್ರೇಯಾಂಕ ಪಟ್ಟಿಯ ದಕ್ಷಿಣ ಭಾರತ ವಲಯದಡಿ ಆಂಧ್ರಪ್ರದೇಶದ ಭಾಮಿನಿ ತಾಲ್ಲೂಕು ಪ್ರಥಮ ಸ್ಥಾನ ಗಳಿಸಿದರೆ, ಕಾಳಗಿ ಎರಡನೇ ಶ್ರೇಯಾಂಕ ಪಡೆಯಲು ಸಫಲವಾಗಿದೆ.</p>.<p>ಶಿಕ್ಷಣ, ಆರೋಗ್ಯ, ಕೌಶಲ, ಮಹಿಳಾ ಮತ್ತು ಮಕ್ಕಳು, ಕೃಷಿ ಸೇರಿದಂತೆ ಜನರ ಜೀವನ ಮಟ್ಟದ ಸುಧಾರಣೆಯ ನಿಟ್ಟಿನಲ್ಲಿ ಕಾಳಗಿಯಲ್ಲಿ ಉತ್ತಮವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೀಗಾಗಿ, ಎರಡನೇ ಶ್ರೇಯಾಂಕ ಲಭಿಸಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p>ಮಹತ್ವಾಕಾಂಕ್ಷೆ ತಾಲ್ಲೂಕುಗಳ ಪಟ್ಟಿಯಲ್ಲಿ ಅಫಜಲಪುರ ಹಾಗೂ ಶಹಾಬಾದ್ ಗುರುತಿಸಲಾಗಿತ್ತು. ಆದರೆ, ಕಾಳಗಿಗೆ ಈ ಶ್ರೇಯಾಂಕ ದೊರೆತಿದೆ. ದೆಹಲಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಜಿಲ್ಲೆಯ ಅಧಿಕಾರಿಗಳನ್ನು ಆಹ್ವಾನಿಸಿ, ಪ್ರಮಾಣ ಪತ್ರ ನೀಡಲಾಗುವುದು. ತಾಲ್ಲೂಕಿಗೆ ಹೆಚ್ಚಿನ ಅನುದಾನವೂ ಲಭಿಸಲಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>