ಗ್ರಾಮದ ತುಂಬಾ ಕೆಸರು ರಚ್ಚೆ ಕಣ್ಣಿಗೆ ಕಾಣಸಿಗುತ್ತದೆ. ಇದರಿಂದ ಜನರು ರೋಸಿ ಹೋಗಿದ್ದಾರೆ. ಕುಂಚಾವರಂ ಕ್ರಾಸ್ನಿಂದ ಗ್ರಾಮದವರೆಗೆ ರಸ್ತೆ ಸಂಪೂರ್ಣ ಹಾಳಾಗಿದೆ. ಚೆಟ್ಟಿನಾಡ್ ಕಂಪೆನಯ ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕ ಶೇಖರಬಾಬು ಅವರಿಗೆ ಮೂಲಸೌಕರ್ಯ ಕಲ್ಪಿಸಲು ಕೋರಿ ಎರಡು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕಂಪನಿ ಸ್ಥಾಪಿಸುವಾಗ ಬಣ್ಣದ ಭರವಸೆ ನೀಡಿದ ಕಂಪೆನಿಯ ಅಧಿಕಾರಿಗಳು, ಸ್ಥಾಪಿಸಿ ದಶಕ ಕಳೆದರೂ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿ ಜಯಪ್ರಕಾಶ ತಳವಾರ ದೂರಿದ್ದಾರೆ.