ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದಲ್ಲಿ ಹಿರಿಯ ಕ್ಯಾಥೊಲಿಕ್ ಪಾದ್ರಿಯ ಹತ್ಯೆ

Last Updated 1 ಮಾರ್ಚ್ 2018, 13:30 IST
ಅಕ್ಷರ ಗಾತ್ರ

ಕೊಚ್ಚಿ: ಹಿರಿಯ ಕ್ಯಾಥೊಲಿಕ್ ಪಾದ್ರಿ ಮತ್ತು ಇಲ್ಲಿನ ಪ್ರಮುಖ ಕ್ರಿಶ್ಚಿಯನ್ ಯಾತ್ರಾಸ್ಥಳ ಮಲಯತ್ತೂರ್‌ನ ಮೇಲ್ವಿಚಾರಕ ಗ್ಸೇವಿಯರ್ ಥೇಲಕ್ಕಾಟ್ (52) ಅವರನ್ನು ಹತ್ಯೆ ಮಾಡಲಾಗಿದೆ.

‘ಗುರುವಾರ ಮಧ್ಯಾಹ್ನ ಗ್ಸೇವಿಯರ್ ಅವರು ಪವಿತ್ರ ಸ್ಥಳ ಕುರಿಸುಮುದೈಗೆ ಹೋಗುತ್ತಿದ್ದಾಗ ಹರಿತವಾದ ಆಯುಧದಿಂದ ಇರಿಯಲಾಗಿದೆ. ಈ ಹಿಂದೆ ಚರ್ಚಿನ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದ ಜಾನಿ ಎಂಬುವವರು ಈ ಕೃತ್ಯ ಮಾಡಿದ್ದಾರೆ. ಮೂರು ತಿಂಗಳುಗಳ ಹಿಂದೆ ಜಾನಿ ಅವರನ್ನು ಕೆಲಸದಿಂದ ತೆಗೆಯಲಾಗಿತ್ತು’ ಎಂದು ಪೊಲೀಸರು ಹೇಳಿದ್ದಾರೆ.

‘ಘಟನೆಯ ನಂತರ ಕಣ್ಮರೆಯಾಗಿರುವ ಜಾನಿಗಾಗಿ ಶೋಧ ಆರಂಭವಾಗಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT