ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಲ್ಲಿಯೂ ಅಸಮಾಧಾನವಿಲ್ಲ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಈಚೆಗಷ್ಟೇ ಪಕ್ಷದ ಶಾಸಕರಸಭೆ ಮಾಡಿದ್ದೆವು.ಎಲ್ಲರೂ ಬಿಜೆಪಿ ಅಭ್ಯರ್ಥಿ ಪರ ಮತ ಹಾಕಿದ್ದಾರೆ. ನಿನ್ನೆ ಸಭೆ ಸೇರಿ ಬಜೆಟ್ನಲ್ಲಿ ಏನೇನು ಸೇರಿಸಬೇಕೆಂದು ಮಾತುಕತೆ ಮಾಡಿದ್ದಾರೆ ಎಂದು ಹೇಳಿದರು.