ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ರಾಜೀನಾಮೆ ಕೊಡಿಸುವ ಅಗತ್ಯವಿಲ್ಲ: ಬಿಎಸ್‌ವೈ

Last Updated 5 ಮಾರ್ಚ್ 2019, 19:23 IST
ಅಕ್ಷರ ಗಾತ್ರ

ಕಲಬುರ್ಗಿ: ‘ಯಾವ ಶಾಸಕರ ರಾಜೀನಾಮೆಯನ್ನೂ ನಾವು ಕೊಡಿಸುವುದಿಲ್ಲ. ಅದರ ಅಗತ್ಯವೂ ನಮಗೆ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ ‘28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಏಕಕಾಲಕ್ಕೆ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಡಾ.ಉಮೇಶ ಜಾಧವ ಬಿಜೆಪಿ ಸೇರ್ಪಡೆ ಆಗುತ್ತಾರಾ’ ಎಂಬ ಪ್ರಶ್ನೆಗೆ, ‘ಜಾಧವ ಈಗಷ್ಟೇ ರಾಜೀನಾಮೆ ಕೊಟ್ಟಿದ್ದಾರೆ. ಪಕ್ಷ ಸೇರ್ಪಡೆ ಬಗ್ಗೆ ಅವರೇ ಸ್ಪಷ್ಟಪಡಿಸಬೇಕು. ಆದರೆ, ಕಲಬುರ್ಗಿ ಲೋಕಸಭಾ ಕ್ಷೇತ್ರವನ್ನು ಶತಾಯಗತಾಯ ಗೆಲ್ಲುತ್ತೇವೆ’ ಎಂದರು.

‘ಮಂಡ್ಯದಲ್ಲಿ ಸುಮಲತಾ ಅವರಿಗೆ ಬೆಂಬಲ ನೀಡಬೇಕೋ ಅಥವಾ ಪಕ್ಷದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕೋ ಎಂಬುದರ ಬಗ್ಗೆ ಯಾವುದೇ ರೀತಿಯ ಚರ್ಚೆಗಳಾಗಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT