<p><strong>ಅಫಜಲಪುರ:</strong> ‘ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-2ರ ವ್ಯಾಪ್ತಿಯ ಅಫಜಲಪುರ ಘಟಕದಿಂದ ಬೆಂಗಳೂರಿಗೆ ಸಿಂದಗಿ, ಮುದ್ದೆಬಿಹಾಳ, ಚಿತ್ರದುರ್ಗ ಮಾರ್ಗವಾಗಿ ಅಮೋಘವರ್ಷ ನಾನ್ ಎಸಿ ಸ್ಲೀಪರ್ ಬಸ್ ಸೇವೆಗೆ ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಎಂ.ಪಾಟೀಲ ಅವರು ಬುಧವಾರ ಚಾಲನೆ ನೀಡಿದರು.</p>.<p>ಕುರಿತು ಅವರು ಮಾತನಾಡಿ, ‘ಬೆಂಗಳೂರಿಗೆ ಓಡಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಂಗಳೂರಿಗೆ ಇಲ್ಲಿಂದ ದಿನಾಲು ಒಂದು ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಬಳ್ಳಾರಿ ಜಿಲ್ಲೆಯ ಉಜ್ಜೈನಿಗೆ ಬಸ್ ಸೇವೆಯನ್ನು ಆರಂಭಿಸಲಾಗುವುದು’ ಎಂದು ತಿಳಿಸಿದರು.</p>.<p>ಇಲ್ಲಿನ ಬಸ್ ಡಿಪೋ ವ್ಯವಸ್ಥಾಪಕ ಅಮಿನಪ್ಪ ಬೋವಿ ಮಾಹಿತಿ ನೀಡಿ, ‘ಅಫಜಲಪುರದಿಂದ ಬೆಂಗಳೂರಿಗೆ ಸಂಜೆ 5.45ಕ್ಕೆ ಹಾಗೂ ಬೆಂಗಳೂರಿನಿಂದ ಅಫಜಲಪುರಕ್ಕೆ ರಾತ್ರಿ 8.30ಕ್ಕೆ ತಲುಪುತ್ತದೆ’ ಎಂದರು.</p>.<p>ತಹಶೀಲ್ದಾರ್ ಸಂಜುಕುಮಾರ ದಾಸರ್ ಮಾತನಾಡಿದರು. ಜಿಲ್ಲಾ ಸಾರಿಗೆ ಇಲಾಖೆಯ ಪ್ರಭಾರಿ ಅಧಿಕಾರಿ ಶ್ರೀದೇವಿ, ಸಿಪಿಐ ಚೆನ್ನಯ್ಯ ಹಿರೇಮಠ, ಮುಖಂಡರಾದ ಸಂಜೀವ ನಿಂಬಾಳ, ರಾಜು ಮನಮಿ, ಚಂದ್ರಶೇಖರ ಕರಜಿಗಿ, ಶರಣು ಕುಂಬಾರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ:</strong> ‘ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ-2ರ ವ್ಯಾಪ್ತಿಯ ಅಫಜಲಪುರ ಘಟಕದಿಂದ ಬೆಂಗಳೂರಿಗೆ ಸಿಂದಗಿ, ಮುದ್ದೆಬಿಹಾಳ, ಚಿತ್ರದುರ್ಗ ಮಾರ್ಗವಾಗಿ ಅಮೋಘವರ್ಷ ನಾನ್ ಎಸಿ ಸ್ಲೀಪರ್ ಬಸ್ ಸೇವೆಗೆ ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ ಎಂ.ಪಾಟೀಲ ಅವರು ಬುಧವಾರ ಚಾಲನೆ ನೀಡಿದರು.</p>.<p>ಕುರಿತು ಅವರು ಮಾತನಾಡಿ, ‘ಬೆಂಗಳೂರಿಗೆ ಓಡಾಡುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಬೆಂಗಳೂರಿಗೆ ಇಲ್ಲಿಂದ ದಿನಾಲು ಒಂದು ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭಿಸಲಾಗಿದೆ. ಇನ್ನೆರಡು ದಿನಗಳಲ್ಲಿ ಬಳ್ಳಾರಿ ಜಿಲ್ಲೆಯ ಉಜ್ಜೈನಿಗೆ ಬಸ್ ಸೇವೆಯನ್ನು ಆರಂಭಿಸಲಾಗುವುದು’ ಎಂದು ತಿಳಿಸಿದರು.</p>.<p>ಇಲ್ಲಿನ ಬಸ್ ಡಿಪೋ ವ್ಯವಸ್ಥಾಪಕ ಅಮಿನಪ್ಪ ಬೋವಿ ಮಾಹಿತಿ ನೀಡಿ, ‘ಅಫಜಲಪುರದಿಂದ ಬೆಂಗಳೂರಿಗೆ ಸಂಜೆ 5.45ಕ್ಕೆ ಹಾಗೂ ಬೆಂಗಳೂರಿನಿಂದ ಅಫಜಲಪುರಕ್ಕೆ ರಾತ್ರಿ 8.30ಕ್ಕೆ ತಲುಪುತ್ತದೆ’ ಎಂದರು.</p>.<p>ತಹಶೀಲ್ದಾರ್ ಸಂಜುಕುಮಾರ ದಾಸರ್ ಮಾತನಾಡಿದರು. ಜಿಲ್ಲಾ ಸಾರಿಗೆ ಇಲಾಖೆಯ ಪ್ರಭಾರಿ ಅಧಿಕಾರಿ ಶ್ರೀದೇವಿ, ಸಿಪಿಐ ಚೆನ್ನಯ್ಯ ಹಿರೇಮಠ, ಮುಖಂಡರಾದ ಸಂಜೀವ ನಿಂಬಾಳ, ರಾಜು ಮನಮಿ, ಚಂದ್ರಶೇಖರ ಕರಜಿಗಿ, ಶರಣು ಕುಂಬಾರ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>