ಕೋವಿಡ್ ಸೋಕಿತರಿಗೆ ಉಚಿತ, ಗುಣಮಟ್ಟದ ಚಿಕಿತ್ಸೆ ಒದಗಿಸಿ, ಮೃತರಾದವರಿಗೆ ₹1 ಲಕ್ಷ ಪರಿಹಾರ ನೀಡಬೇಕು. ಕೋವಿಡ್ ಯೋಧರಿಗೆ ಜೀವನ ಭದ್ರತೆ ಒದಗಿಸಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಬಾರದ ಕುಟುಂಬಗಳಿಗೆ ತಲಾ ₹10 ಸಾವಿರ ನೀಡಬೇಕು. ನರೇಗಾ ಕೂಲಿಯನ್ನು ₹600 ಕ್ಕೆ ಏರಿಕೆ ಮಾಡಬೇಕು ಹಾಗೂ ನಗರದಲ್ಲಿಯೂ ನರೇಗಾ ಯೋಜನೆ ಆರಂಭಿಸಬೇಕು ಎಂದು ಅವರು ಒತ್ತಾಯಿಸಿದರು.