ಅಶೋಕ ನಗರ, ಶಹಾಬಜಾರ್, ಬ್ರಹ್ಮಪುರ ಮತ್ತು ಕೇಂದ್ರ ಬಸ್ ನಿಲ್ದಾಣದ ಎದುರು ನಡೆದ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಎನ್ಎಸ್ಎಸ್ ಕೋಶದ ಸಂಯೋಜ
ನಾಧಿಕಾರಿ ಪ್ರೊ. ರಮೇಶ ಲಂಡನಕರ್, ‘ಕೋವಿಡ್ ರೋಗಾಣುವಿನಿಂದ ಜನರು ರಕ್ಷಣೆ ಮಾಡಿಕೊಳ್ಳಬೇಕು. ವಿಶ್ವದಾದ್ಯಂತ ಲಕ್ಷಾಂತರ ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ಜನರಿಗೆ ಆರೋಗ್ಯ ಸೌಲಭ್ಯಗಳು ಸಮರ್ಪಕವಾಗಿ ಒದಗುತ್ತಿಲ್ಲ. ಕೊರೊನಾ ಮಹಾಮಾರಿ ಹಿಮ್ಮೆಟ್ಟಿಸಬೇಕೆಂದರೆ ಜನರು ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕು. ಮನೆಯಿಂದ ಆಚೆ ಬರಬಾರದು. ಸರ್ಕಾರ ನಿಗದಿಪಡಿಸಿದ ಸಮಯದಲ್ಲಿ ಮನೆಯಿಂದ ಹೊರಬರಬೇಕಾದ ಸಂದರ್ಭದಲ್ಲಿ ಮುಖ
ಗವಸು ಹಾಕಿಕೊಳ್ಳಬೇಕು. ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು’ ಎಂದರು.