<p><strong>ಶಹಾಬಾದ್:</strong> ಹೊನಗುಂಟ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸುವಂತೆ ಗ್ರಾಮಸ್ಥರು ಹಾಗೂ ಎಐಡಿವೈಒ ಯುವಜನ ಸಂಘಟನೆ ಬುಧವಾರ ಪ್ರತಿಭಟನೆ ನಡೆಸಿದ ಪರಿಣಾಮ ತಾಲ್ಲೂಕು ಪಂಚಾಯಿತಿ ಇಒ ಮಲ್ಲಿನಾಥ ರಾವೂರ ಅವರು ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬೆಳಿಗ್ಗೆಯಿಂದಲೇ ಚರಂಡಿಗಳ ಸ್ವಚ್ಛತೆಗೆ ಮುಂದಾಗಿದ್ದು, ‘ಬೀದಿ ದೀಪಗಳು ಅಳವಡಿಸಲಾಗುವುದು, ಕುಡಿಯುವ ನೀರಿಗೆ ಪ್ರತ್ಯೇಕ ಪೈಪ್ಲೈನ್ ಸಂಪರ್ಕ ಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ, ಶೀಘ್ರ ನೀರಿನ ವ್ಯವಸ್ಥೆ ಮಾಡಲಾಗುವುದು. ಅಲ್ಲಿವರೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತೇವೆ’ ಎಂದು ತಿಳಿಸಿದರು.</p>.<p>‘ಹಳೆಯ ಸಾರ್ವಜನಿಕ ಶೌಚಾಲಯ ನಿರುಪಯುಕ್ತವಾಗಿದ್ದು, ಆ ಸ್ಥಳದಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಲು ಮೇಲಾಧಿಕಾರಿಗಳ ಜೊತೆಗೆ ಮಾತನಾಡಿ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.</p>.<p>ಎಐಡಿವೈಒ ಜಿಲ್ಲಾ ಘಟಕ ಅಧ್ಯಕ್ಷ ಜಗನ್ನಾಥ ಎಸ್.ಎಚ್ ಮಾತನಾಡಿ, ‘ಆಶ್ವಾಸನೆ ನೀಡಿರುವ ಬೇಡಿಕೆಗಳು ಈಡೇರದಿದ್ದರೆ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ಮಾಡಲಾಗುವುದು’ ಎಂದರು.</p>.<p>ಪಿಡಿಒ ಮಹಾದೇವಪ್ಪ ದ್ಯಾಮ, ಗ್ರಾ.ಪಂ ಅಧ್ಯಕ್ಷ ಮಹೇಬುಬ್ ಹೋಟೆಲ್, ಎಐಡಿವೈಒ ಶಹಾಬಾದ್ ಕಾರ್ಯದರ್ಶಿ ರಮೇಶ ದೇವಕರ್, ದೇವರಾಜ ರಾಜೋಳ, ಶಿವು ಬುರ್ಲಿ, ಚಂದ್ರು ಮರಗೋಳ, ದೀಪಣ್ಣ ಕೋಳೆ, ಮೌನೇಶ್ ರಾಜೋಳ, ದತ್ತು ಪೂಜಾರಿ, ಶಂಕರ್ ಭಜಂತ್ರಿ, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಹಾಬಾದ್:</strong> ಹೊನಗುಂಟ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸುವಂತೆ ಗ್ರಾಮಸ್ಥರು ಹಾಗೂ ಎಐಡಿವೈಒ ಯುವಜನ ಸಂಘಟನೆ ಬುಧವಾರ ಪ್ರತಿಭಟನೆ ನಡೆಸಿದ ಪರಿಣಾಮ ತಾಲ್ಲೂಕು ಪಂಚಾಯಿತಿ ಇಒ ಮಲ್ಲಿನಾಥ ರಾವೂರ ಅವರು ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.</p>.<p>ಬೆಳಿಗ್ಗೆಯಿಂದಲೇ ಚರಂಡಿಗಳ ಸ್ವಚ್ಛತೆಗೆ ಮುಂದಾಗಿದ್ದು, ‘ಬೀದಿ ದೀಪಗಳು ಅಳವಡಿಸಲಾಗುವುದು, ಕುಡಿಯುವ ನೀರಿಗೆ ಪ್ರತ್ಯೇಕ ಪೈಪ್ಲೈನ್ ಸಂಪರ್ಕ ಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ, ಶೀಘ್ರ ನೀರಿನ ವ್ಯವಸ್ಥೆ ಮಾಡಲಾಗುವುದು. ಅಲ್ಲಿವರೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತೇವೆ’ ಎಂದು ತಿಳಿಸಿದರು.</p>.<p>‘ಹಳೆಯ ಸಾರ್ವಜನಿಕ ಶೌಚಾಲಯ ನಿರುಪಯುಕ್ತವಾಗಿದ್ದು, ಆ ಸ್ಥಳದಲ್ಲಿ ಹೊಸದಾಗಿ ಶೌಚಾಲಯ ನಿರ್ಮಿಸಲು ಮೇಲಾಧಿಕಾರಿಗಳ ಜೊತೆಗೆ ಮಾತನಾಡಿ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಹೇಳಿದರು.</p>.<p>ಎಐಡಿವೈಒ ಜಿಲ್ಲಾ ಘಟಕ ಅಧ್ಯಕ್ಷ ಜಗನ್ನಾಥ ಎಸ್.ಎಚ್ ಮಾತನಾಡಿ, ‘ಆಶ್ವಾಸನೆ ನೀಡಿರುವ ಬೇಡಿಕೆಗಳು ಈಡೇರದಿದ್ದರೆ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ಮಾಡಲಾಗುವುದು’ ಎಂದರು.</p>.<p>ಪಿಡಿಒ ಮಹಾದೇವಪ್ಪ ದ್ಯಾಮ, ಗ್ರಾ.ಪಂ ಅಧ್ಯಕ್ಷ ಮಹೇಬುಬ್ ಹೋಟೆಲ್, ಎಐಡಿವೈಒ ಶಹಾಬಾದ್ ಕಾರ್ಯದರ್ಶಿ ರಮೇಶ ದೇವಕರ್, ದೇವರಾಜ ರಾಜೋಳ, ಶಿವು ಬುರ್ಲಿ, ಚಂದ್ರು ಮರಗೋಳ, ದೀಪಣ್ಣ ಕೋಳೆ, ಮೌನೇಶ್ ರಾಜೋಳ, ದತ್ತು ಪೂಜಾರಿ, ಶಂಕರ್ ಭಜಂತ್ರಿ, ಗ್ರಾಮಸ್ಥರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>