‘ಅಸ್ವಸ್ಥರನ್ನು ಭೇಟಿಯಾಗಿ, ಮಾಹಿತಿ ಪಡೆದಿದ್ದೇನೆ. ಕಲುಷಿತ ನೀರು ಹೇಗೆ ಪೂರೈಕೆಯಾಯಿತು ಎಂಬುದರ ಬಗ್ಗೆ ಮಾಹಿತಿ ಪಡೆದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ತಾಯಪ್ಪ ಬೇಲೂರ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ ಧನದ ಚೆಕ್ ನೀಡಿದ್ದೇನೆ’ ಎಂದು ಜೇವರ್ಗಿ ಶಾಸಕ ಡಾ. ಅಜಯ ಸಿಂಗ್ ತಿಳಿಸಿದರು.