<p>ಅಫಜಲಪುರ: ತಾಲ್ಲೂಕಿನ ಚೌಡಾಪೂರ ಗ್ರಾಮದಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿ ಹಾಗೂ ಸಾಮ್ರಾಟ್ ಅಶೋಕ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಶೌಚಾಲಯ ಬಳಕೆ, ಒಣ ಕಸ ಹಾಗೂ ಹಸಿ ಕಸಗಳ ಬೇರ್ಪಡಿಸುವಿಕೆ, ಧೂಮಪಾನ, ಮಧ್ಯಪಾನ, ಸರಾಯಿ, ಕೊರೊನಾ, ಓಮೈಕ್ರಾನ್ ಮುಂತಾದ ವಿಷಯಗಳ ಕುರಿತು ಉಪನ್ಯಾಸ, ಸ್ಟಿಕ್ಕರ್ ಹಾಗೂ ಬೀದಿ ನಾಟಕ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೇಮ ದೊಡ್ಡಮನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಗೀತ ರಾಜು ಗುತ್ತೇದಾರ ಸ್ಟಿಕರ್ ಬಿಡುಗಡೆ ಮಾಡಿದರು.</p>.<p>ಸಾಮ್ರಾಟ್ ಅಶೋಕ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಯಲ್ಲಪ್ಪ ಮ್ಯಾಕೇರಿ ಮಲ್ಲಾಬಾದ, ಗ್ರಾಮ ಪಂಚಾಯಿತಿ ಸದಸ್ಯ ಅಶೋಕ್ ಪೂಜಾರಿ, ಪ್ರಕಾಶ್ ಪಾಟೀಲ್, ಖಾಜಾಸಾಬ್, ಮೋಬಿನ್ ಪಟೇಲ್, ಶೀವು ಪಾಟೀಲ್, ಚಿದಾನಂದ ತೆಳಕೇರಿ, ಸುಭಾಷ ಯಳಸಂಗಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಫಜಲಪುರ: ತಾಲ್ಲೂಕಿನ ಚೌಡಾಪೂರ ಗ್ರಾಮದಲ್ಲಿ ಮಂಗಳವಾರ ಗ್ರಾಮ ಪಂಚಾಯಿತಿ ಹಾಗೂ ಸಾಮ್ರಾಟ್ ಅಶೋಕ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಶೌಚಾಲಯ ಬಳಕೆ, ಒಣ ಕಸ ಹಾಗೂ ಹಸಿ ಕಸಗಳ ಬೇರ್ಪಡಿಸುವಿಕೆ, ಧೂಮಪಾನ, ಮಧ್ಯಪಾನ, ಸರಾಯಿ, ಕೊರೊನಾ, ಓಮೈಕ್ರಾನ್ ಮುಂತಾದ ವಿಷಯಗಳ ಕುರಿತು ಉಪನ್ಯಾಸ, ಸ್ಟಿಕ್ಕರ್ ಹಾಗೂ ಬೀದಿ ನಾಟಕ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.</p>.<p>ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರೇಮ ದೊಡ್ಡಮನಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಂಗೀತ ರಾಜು ಗುತ್ತೇದಾರ ಸ್ಟಿಕರ್ ಬಿಡುಗಡೆ ಮಾಡಿದರು.</p>.<p>ಸಾಮ್ರಾಟ್ ಅಶೋಕ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಯಲ್ಲಪ್ಪ ಮ್ಯಾಕೇರಿ ಮಲ್ಲಾಬಾದ, ಗ್ರಾಮ ಪಂಚಾಯಿತಿ ಸದಸ್ಯ ಅಶೋಕ್ ಪೂಜಾರಿ, ಪ್ರಕಾಶ್ ಪಾಟೀಲ್, ಖಾಜಾಸಾಬ್, ಮೋಬಿನ್ ಪಟೇಲ್, ಶೀವು ಪಾಟೀಲ್, ಚಿದಾನಂದ ತೆಳಕೇರಿ, ಸುಭಾಷ ಯಳಸಂಗಿ<br />ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>