ಸಂಜೆ 7ಕ್ಕೆ ಶಿವಾನುಭವ ಚಿಂತನ ಕಾರ್ಯಕ್ರಮ ನಡೆಯಲಿದೆ. ಜಿಡಗಾ ಮಠದ ಡಾ.ಮುರುಘರಾಜೇಂದ್ರ ಸ್ವಾಮೀಜಿ, ಸೋಲಾಪುರ ಸಂಸದ ಡಾ.ಜಯಸಿದ್ದೇಶ್ವರ ಶಿವಾಚಾರ್ಯ, ಶಾಸಕ ಬಿ.ನಾರಾಯಣ ರಾವ, ಸಂಸದ ಭಗವಂತರಾವ ಖೂಬಾ, ಶಾಸಕರಾದ ರಾಜಶೇಖರ ಪಾಟೀಲ, ರಾಜಕುಮಾರ ಪಾಟೀಲ ತೆಲ್ಕೂರ, ಬಸವರಾಜ ಮತ್ತಿಮೂಡ, ಕಲಬುರ್ಗಿ ಜಿ.ಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಬಸವ ಕಲ್ಯಾಣ ಜಿ.ಪಂ ಅಧ್ಯಕ್ಷೆ ಯಶೋಧಾ ರಾಠೋಡ ಉಪಸ್ಥಿತರಿರುವರು.