<p><strong>ಕಲಬುರಗಿ: </strong>ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.</p>.<p>ಕಲಬುರಗಿ ನಿವಾಸಿ ಎನ್.ವಿ.ಸುನೀಲ ಕುಮಾರ ಬಂಧಿತ. ಇಲ್ಲಿನ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿಯೇ ಸುನೀಲ ಕುಮಾರ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣ ಬಳಸಿ ಪಾಸಾದ ಆರೋಪ ಇವರ ಮೇಲಿದೆ.</p>.<p>ಹಗರಣದಲ್ಲಿ ಈಗಾಗಲೇ ಬಂಧಿತರಾದ ರುದ್ರಗೌಡ ಡಿ. ಪಾಟೀಲ ಮುಖಾಂತರವೇ ಸುನೀಲಕುಮಾರ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲೆಗಳ ಮರುಪರಿಶೀಲನೆಗೆ ಹಾಜರಾಗಲು ಸುನೀಲಕುಮಾರಗೆ ಬುಲಾವ್ ಬಂದಿತ್ತು. ಸೋಮವಾರ ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿದ್ದರು. ಪರಿಶೀಲನೆ ವೇಳೆ ಅಕ್ರಮ ನಡೆದ ಸಂದೇಹ ಬಂದಿದ್ದು, ಆರೋಪಿಯನ್ನು ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದರು.</p>.<p>ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ಅವರನ್ನು ಕಲಬುರಗಿಗೆ ಕರೆತಂದಿತು.</p>.<p>ಆರೋಪಿಯು ರುದ್ರಗೌಡ ಡಿ. ಪಾಟೀಲಗೆ ₹ 40 ಲಕ್ಷ ಹಣ ನೀಡಿದ್ದ ಎಂಬ ಸಂಶಯ ಇದ್ದು, ವಿಚಾರಣೆ ನಡೆದಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.</p>.<p>ಇದನ್ನೂ ಒದಿ.. <a href="https://www.prajavani.net/district/bengaluru-city/cid-enquiry-on-psi-exam-issue-and-fraud-case-931662.html">ಪಿಎಸ್ಐ ನೇಮಕಾತಿ ಅಕ್ರಮ: 50 ಅಭ್ಯರ್ಥಿಗಳ ವಿಚಾರಣೆ</a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ: </strong>ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.</p>.<p>ಕಲಬುರಗಿ ನಿವಾಸಿ ಎನ್.ವಿ.ಸುನೀಲ ಕುಮಾರ ಬಂಧಿತ. ಇಲ್ಲಿನ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿಯೇ ಸುನೀಲ ಕುಮಾರ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣ ಬಳಸಿ ಪಾಸಾದ ಆರೋಪ ಇವರ ಮೇಲಿದೆ.</p>.<p>ಹಗರಣದಲ್ಲಿ ಈಗಾಗಲೇ ಬಂಧಿತರಾದ ರುದ್ರಗೌಡ ಡಿ. ಪಾಟೀಲ ಮುಖಾಂತರವೇ ಸುನೀಲಕುಮಾರ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.<p>ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲೆಗಳ ಮರುಪರಿಶೀಲನೆಗೆ ಹಾಜರಾಗಲು ಸುನೀಲಕುಮಾರಗೆ ಬುಲಾವ್ ಬಂದಿತ್ತು. ಸೋಮವಾರ ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿದ್ದರು. ಪರಿಶೀಲನೆ ವೇಳೆ ಅಕ್ರಮ ನಡೆದ ಸಂದೇಹ ಬಂದಿದ್ದು, ಆರೋಪಿಯನ್ನು ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದರು.</p>.<p>ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ಅವರನ್ನು ಕಲಬುರಗಿಗೆ ಕರೆತಂದಿತು.</p>.<p>ಆರೋಪಿಯು ರುದ್ರಗೌಡ ಡಿ. ಪಾಟೀಲಗೆ ₹ 40 ಲಕ್ಷ ಹಣ ನೀಡಿದ್ದ ಎಂಬ ಸಂಶಯ ಇದ್ದು, ವಿಚಾರಣೆ ನಡೆದಿದೆ ಎಂದು ಸಿಐಡಿ ಮೂಲಗಳು ತಿಳಿಸಿವೆ.</p>.<p>ಇದನ್ನೂ ಒದಿ.. <a href="https://www.prajavani.net/district/bengaluru-city/cid-enquiry-on-psi-exam-issue-and-fraud-case-931662.html">ಪಿಎಸ್ಐ ನೇಮಕಾತಿ ಅಕ್ರಮ: 50 ಅಭ್ಯರ್ಥಿಗಳ ವಿಚಾರಣೆ</a><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>