<p>ಕಲಬುರ್ಗಿ: ಸಂಪೂರ್ಣ ಜಜ್ಜಿ ಹೋಗಿದ್ದ ಕೈಯನ್ನು ಶಸ್ತ್ರಚಿಕಿತ್ಸೆ ಮೂಲಕ ಮರು ಜೋಡಣೆ ಮಾಡುವಯಲ್ಲಿ ಇಲ್ಲಿನ ಮನೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.<br /><br />ಶಹಾಪುರ ತಾಲ್ಲೂನ ತಡಿಬಡಿ ಗ್ರಾಮದ 36 ವರ್ಷದಭೀಮರಾಯ ಅವರ ಕೈ ಕಬ್ಬಿನ ರಸ ತೆಗೆಯುವ ಯಂತ್ರದಲ್ಲಿ ಸಿಕ್ಕಿಕೊಂಡು ಸಂಪೂರ್ಣ ಜಜ್ಜಿ ಹೋಗಿತ್ತು. ಕೈಯಲ್ಲಿನ ಎಲ್ಲ ಎಲುಬು, ನರಗಳು ಕತ್ತರಿಸಿಹೋಗಿದ್ದವು. ಒಂದು ನರ ಮಾತ್ರ ಉಳಿದಿತ್ತು.<br /><br />‘ಇಂಥ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಮೊಣಕೈನಿಂದ ಮುಂದಿನ ಭಾಗವನ್ನು ಕತ್ತರಿಸಿ ತೆಗೆಯುವುದು ಅನಿವಾರ್ಯ ಎಂದು ಕೆಲ ವೈದ್ಯರು ತಿಳಿಸಿದ್ದರು. ಆದರೆ, ಈ ಪ್ರಕರಣವನ್ನು ಸವಾಲಾಗಿ ತೆಗೆದುಕೊಂಡ ಇಲ್ಲಿನ ಹುಮನಾಬಾದ್ ರಿಂಗ್ ರಸ್ತೆಯಲ್ಲಿರುವ ಮನೂರ ಆಸ್ಪತ್ರೆಯ ವೈದ್ಯರು ಅಪರೂಪದ ಶಸ್ತ್ರಚಿಕಿತ್ಸೆ ಮಾಡಿದ್ದಾರೆ’ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಫಾರೂಕ್ ಮನೂರ ತಿಳಿಸಿದ್ದಾರೆ.</p>.<p>‘ದೇಹದ ಬೇರೆ ಅಂಗದಲ್ಲಿನ ನರ ತೆಗೆದು ಕೈಗೆ ಜೋಡಿಸಲಾಗಿದೆ. ಜಜ್ಜಿಹೋಗಿದ್ದ ಎಲುಬುಗಳನ್ನು ಮರುಜೋಡಣೆ ಮಾಡಲಾಗಿದೆ. 15 ದಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಈ ಶಸ್ತ್ರಚಿಕಿತ್ಸೆ ಮಾಡಲು ಸುಮಾರು ₹ 10 ಲಕ್ಷ ಖರ್ಚಾಗಿದೆ. ರೋಗಿಯು ಬಡವನಾಗಿದ್ದರಿಂದ ಕೇವಲ ₹ 1.10 ಲಕ್ಷ ಬಿಲ್ ಮಾಡಿದ್ದೇವೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಈ ಶಸ್ತ್ರಿಚಿಕಿತ್ಸೆ ತಂಡದಲ್ಲಿ ಡಾ.ಫಾರೂಕ್ ಮನೂರ, ಡಾ.ವಿವೇಕ, ಡಾ.ಅನೀಲ್ಕುಮಾರ, ಡಾ.ಪವನ್ ಪಾಟೀಲ, ಡಾ.ಅನೀಲ್ ಶ್ರಮ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಲಬುರ್ಗಿ: ಸಂಪೂರ್ಣ ಜಜ್ಜಿ ಹೋಗಿದ್ದ ಕೈಯನ್ನು ಶಸ್ತ್ರಚಿಕಿತ್ಸೆ ಮೂಲಕ ಮರು ಜೋಡಣೆ ಮಾಡುವಯಲ್ಲಿ ಇಲ್ಲಿನ ಮನೂರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.<br /><br />ಶಹಾಪುರ ತಾಲ್ಲೂನ ತಡಿಬಡಿ ಗ್ರಾಮದ 36 ವರ್ಷದಭೀಮರಾಯ ಅವರ ಕೈ ಕಬ್ಬಿನ ರಸ ತೆಗೆಯುವ ಯಂತ್ರದಲ್ಲಿ ಸಿಕ್ಕಿಕೊಂಡು ಸಂಪೂರ್ಣ ಜಜ್ಜಿ ಹೋಗಿತ್ತು. ಕೈಯಲ್ಲಿನ ಎಲ್ಲ ಎಲುಬು, ನರಗಳು ಕತ್ತರಿಸಿಹೋಗಿದ್ದವು. ಒಂದು ನರ ಮಾತ್ರ ಉಳಿದಿತ್ತು.<br /><br />‘ಇಂಥ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯ ಮೊಣಕೈನಿಂದ ಮುಂದಿನ ಭಾಗವನ್ನು ಕತ್ತರಿಸಿ ತೆಗೆಯುವುದು ಅನಿವಾರ್ಯ ಎಂದು ಕೆಲ ವೈದ್ಯರು ತಿಳಿಸಿದ್ದರು. ಆದರೆ, ಈ ಪ್ರಕರಣವನ್ನು ಸವಾಲಾಗಿ ತೆಗೆದುಕೊಂಡ ಇಲ್ಲಿನ ಹುಮನಾಬಾದ್ ರಿಂಗ್ ರಸ್ತೆಯಲ್ಲಿರುವ ಮನೂರ ಆಸ್ಪತ್ರೆಯ ವೈದ್ಯರು ಅಪರೂಪದ ಶಸ್ತ್ರಚಿಕಿತ್ಸೆ ಮಾಡಿದ್ದಾರೆ’ ಎಂದು ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಫಾರೂಕ್ ಮನೂರ ತಿಳಿಸಿದ್ದಾರೆ.</p>.<p>‘ದೇಹದ ಬೇರೆ ಅಂಗದಲ್ಲಿನ ನರ ತೆಗೆದು ಕೈಗೆ ಜೋಡಿಸಲಾಗಿದೆ. ಜಜ್ಜಿಹೋಗಿದ್ದ ಎಲುಬುಗಳನ್ನು ಮರುಜೋಡಣೆ ಮಾಡಲಾಗಿದೆ. 15 ದಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿ ಈಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಈ ಶಸ್ತ್ರಚಿಕಿತ್ಸೆ ಮಾಡಲು ಸುಮಾರು ₹ 10 ಲಕ್ಷ ಖರ್ಚಾಗಿದೆ. ರೋಗಿಯು ಬಡವನಾಗಿದ್ದರಿಂದ ಕೇವಲ ₹ 1.10 ಲಕ್ಷ ಬಿಲ್ ಮಾಡಿದ್ದೇವೆ’ ಎಂದೂ ಅವರು ತಿಳಿಸಿದ್ದಾರೆ.</p>.<p>ಈ ಶಸ್ತ್ರಿಚಿಕಿತ್ಸೆ ತಂಡದಲ್ಲಿ ಡಾ.ಫಾರೂಕ್ ಮನೂರ, ಡಾ.ವಿವೇಕ, ಡಾ.ಅನೀಲ್ಕುಮಾರ, ಡಾ.ಪವನ್ ಪಾಟೀಲ, ಡಾ.ಅನೀಲ್ ಶ್ರಮ ವಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>