<p><strong>ಕಲಬುರಗಿ:</strong> ತೀವ್ರ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ಜನ, ಜಾನುವಾರುಗಳ ಕುಡಿಯುವ ನೀರಿಗಾಗಿ ನಾರಾಯಣಪುರ ಜಲಾಶಯದಿಂದ 1 ಟಿಎಂಸಿ ಅಡಿ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>ಭೀಮಾ ನದಿಗೆ ನಾರಾಯಣಪುರ ಜಲಾಶಯ ಹಾಗೂ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಅಫಜಲಪುರದಲ್ಲಿ ಹಲವು ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ಸತ್ಯಾಗ್ರಹಕ್ಕೆ ವಿವಿಧ ಪಕ್ಷಗಳು, ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು.</p>.<p>ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸೋಮವಾರ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ನೀರು ಬಿಡುಗಡೆಗೆ ಒತ್ತಡ ಹೇರಿದ್ದರು.</p>.<p>ಇದಕ್ಕೆ ಸ್ಪಂದಿಸಿದ ಶಿವಕುಮಾರ್ ಅವರು ನೀರು ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದಾದ ಬೆನ್ನಲ್ಲಿಯೇ ಕುಡಿಯುವ ನೀರಿನ ಅಗತ್ಯಕ್ಕಾಗಿ ನಾರಾಯಣಪುರ ಜಲಾಶಯದಿಂದ ಕೆಬಿಜೆಎನ್ಎಲ್ನ ಇಂಡಿ ಶಾಖಾ ಕಾಲುವೆ ಮೂಲಕ 1 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ತೀವ್ರ ಬರಗಾಲದಿಂದ ತತ್ತರಿಸಿರುವ ಜಿಲ್ಲೆಯ ಜನ, ಜಾನುವಾರುಗಳ ಕುಡಿಯುವ ನೀರಿಗಾಗಿ ನಾರಾಯಣಪುರ ಜಲಾಶಯದಿಂದ 1 ಟಿಎಂಸಿ ಅಡಿ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡುವಂತೆ ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>ಭೀಮಾ ನದಿಗೆ ನಾರಾಯಣಪುರ ಜಲಾಶಯ ಹಾಗೂ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ ಅಫಜಲಪುರದಲ್ಲಿ ಹಲವು ದಿನಗಳಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಈ ಸತ್ಯಾಗ್ರಹಕ್ಕೆ ವಿವಿಧ ಪಕ್ಷಗಳು, ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು.</p>.<p>ಅಫಜಲಪುರ ಶಾಸಕ ಎಂ.ವೈ. ಪಾಟೀಲ, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸೋಮವಾರ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ನೀರು ಬಿಡುಗಡೆಗೆ ಒತ್ತಡ ಹೇರಿದ್ದರು.</p>.<p>ಇದಕ್ಕೆ ಸ್ಪಂದಿಸಿದ ಶಿವಕುಮಾರ್ ಅವರು ನೀರು ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದಾದ ಬೆನ್ನಲ್ಲಿಯೇ ಕುಡಿಯುವ ನೀರಿನ ಅಗತ್ಯಕ್ಕಾಗಿ ನಾರಾಯಣಪುರ ಜಲಾಶಯದಿಂದ ಕೆಬಿಜೆಎನ್ಎಲ್ನ ಇಂಡಿ ಶಾಖಾ ಕಾಲುವೆ ಮೂಲಕ 1 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>