<p><strong>ಅಫಜಲಪುರ (ಕಲಬುರ್ಗಿ ಜಿಲ್ಲೆ): </strong>ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.</p>.<p>ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್ಗಳು ಖಾಲಿ ಆದ ಕಾರಣ ನಾಲ್ವರು ಬೆಡ್ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.</p>.<p>ಅಫಜಲಪುರ ತಾಲ್ಲೂಕಿನ ಮಾತೊಳ್ಳಿ ಗ್ರಾಮದ ಅಮೋಗಿ ಗಂಗಪ್ಪ (45), ಶಿವಪುರದ ಬಸವನಗೌಡ ಭೀಮನಗೌಡ (35), ಅಫಜಲಪುರದವರಾದ ಅಂಬಿಕಾ ನಾಗರಾಜ ಪಾಟೀಲ (37) ಹಾಗೂ ಹಸೀನಾಬೇಗಂ ಇಮಾಮ್ಬೇಗ್ (65)ಆಮ್ಲಜನಕ ಕೊರತೆಯಿಂದ ಸಾವಿಗೀಡಾದವರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಆಮ್ಲಜನಕ ಕೊರತೆಯಿಂದಾಗಿಯೇ ಭಾನುವಾರ ಕೂಡ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಶನಿವಾರ ಕೂಡ ಮೂವರು ಸತ್ತಿದ್ದರು. ಮೂರು ದಿನಗಳಲ್ಲಿ 12 ಮಂದಿ ಆಮ್ಲಜನಕ ಕೊರತೆಯಿಂದಾಗಿಯೇ ಪ್ರಾಣ ಬಿಟ್ಟಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/chamarajanagara/twenty-four-died-due-to-oxygen-shortage-827701.html" target="_blank">ಸಕಾಲದಲ್ಲಿ ಪೂರೈಕೆಯಾಗದ ಆಮ್ಲಜನಕ: 24 ಸಾವು?</a></strong></p>.<p><strong>ಅಫಜಲಪುರ ಆಸ್ಪತ್ರೆಯಲ್ಲಿ ವೈದ್ಯರೇಇಲ್ಲ</strong><br />‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರೇಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.</p>.<p>‘ಸರ್ಕಾರಕ್ಕೆ ಗಂಭೀರತೆ ಇಲ್ಲ. ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p><strong>ಆಮ್ಲಜನಕ ಕೊರತೆ ಇಲ್ಲ: ಸಚಿವ</strong><br />‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್ನಿಂದ ಆರೋಗ್ಯ ವಿಷಮಿಸಿದ್ದರಿಂದ ಸೋಮವಾರ ಮೂವರುಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಸೋಂಕಿತರು ಮೃತಪಟ್ಟಿದ್ದು ಆಮ್ಲಜನಕದ ಕೊರತೆಯಿಂದಲ್ಲ ಎಂದು ಸಂಸದ ಉಮೇಶ ಜಾಧವ ಅವರೂ ಹೇಳಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/chamarajanagara/district-administration-neglected-in-chamarajanagar-hospital-case-827884.html" target="_blank">ಆಮ್ಲಜನಕ ದುರಂತ: ನಿರ್ಲಕ್ಷ್ಯ ವಹಿಸಿತೇ ಜಿಲ್ಲಾಡಳಿತ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಫಜಲಪುರ (ಕಲಬುರ್ಗಿ ಜಿಲ್ಲೆ): </strong>ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.</p>.<p>ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್ಗಳು ಖಾಲಿ ಆದ ಕಾರಣ ನಾಲ್ವರು ಬೆಡ್ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.</p>.<p>ಅಫಜಲಪುರ ತಾಲ್ಲೂಕಿನ ಮಾತೊಳ್ಳಿ ಗ್ರಾಮದ ಅಮೋಗಿ ಗಂಗಪ್ಪ (45), ಶಿವಪುರದ ಬಸವನಗೌಡ ಭೀಮನಗೌಡ (35), ಅಫಜಲಪುರದವರಾದ ಅಂಬಿಕಾ ನಾಗರಾಜ ಪಾಟೀಲ (37) ಹಾಗೂ ಹಸೀನಾಬೇಗಂ ಇಮಾಮ್ಬೇಗ್ (65)ಆಮ್ಲಜನಕ ಕೊರತೆಯಿಂದ ಸಾವಿಗೀಡಾದವರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.</p>.<p>ಆಮ್ಲಜನಕ ಕೊರತೆಯಿಂದಾಗಿಯೇ ಭಾನುವಾರ ಕೂಡ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಶನಿವಾರ ಕೂಡ ಮೂವರು ಸತ್ತಿದ್ದರು. ಮೂರು ದಿನಗಳಲ್ಲಿ 12 ಮಂದಿ ಆಮ್ಲಜನಕ ಕೊರತೆಯಿಂದಾಗಿಯೇ ಪ್ರಾಣ ಬಿಟ್ಟಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/chamarajanagara/twenty-four-died-due-to-oxygen-shortage-827701.html" target="_blank">ಸಕಾಲದಲ್ಲಿ ಪೂರೈಕೆಯಾಗದ ಆಮ್ಲಜನಕ: 24 ಸಾವು?</a></strong></p>.<p><strong>ಅಫಜಲಪುರ ಆಸ್ಪತ್ರೆಯಲ್ಲಿ ವೈದ್ಯರೇಇಲ್ಲ</strong><br />‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರೇಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.</p>.<p>‘ಸರ್ಕಾರಕ್ಕೆ ಗಂಭೀರತೆ ಇಲ್ಲ. ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.</p>.<p><strong>ಆಮ್ಲಜನಕ ಕೊರತೆ ಇಲ್ಲ: ಸಚಿವ</strong><br />‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್ನಿಂದ ಆರೋಗ್ಯ ವಿಷಮಿಸಿದ್ದರಿಂದ ಸೋಮವಾರ ಮೂವರುಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.</p>.<p>ಸೋಂಕಿತರು ಮೃತಪಟ್ಟಿದ್ದು ಆಮ್ಲಜನಕದ ಕೊರತೆಯಿಂದಲ್ಲ ಎಂದು ಸಂಸದ ಉಮೇಶ ಜಾಧವ ಅವರೂ ಹೇಳಿದ್ದಾರೆ.</p>.<p><strong>ಇದನ್ನೂ ಓದಿ... <a href="https://www.prajavani.net/district/chamarajanagara/district-administration-neglected-in-chamarajanagar-hospital-case-827884.html" target="_blank">ಆಮ್ಲಜನಕ ದುರಂತ: ನಿರ್ಲಕ್ಷ್ಯ ವಹಿಸಿತೇ ಜಿಲ್ಲಾಡಳಿತ?</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>