ಈ ಕುರಿತು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ‘ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ತಂಡವನ್ನು ಕಳುಹಿಸಿಕೊಟ್ಟಿದ್ದೇವೆ. ಪ್ರಾಥಮಿಕ ವರದಿಗಳ ಪ್ರಕಾರ ಮೂವರು ಮೃತಪಟ್ಟಿದ್ದಾರೆ. ಆದರೆ, ಆಕ್ಸಿಜನ್ ಸಮಸ್ಯೆ ಇರಲಿಲ್ಲ ಎಂದು ಕೆಬಿಎನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ. ಆಕ್ಸಿಜನ್ ಅಗತ್ಯವಿದ್ದರೆ ಅವರು ಕರೆ ಮಾಡುತ್ತಿದ್ದರು. ಶುಕ್ರವಾರವೇ ಬೀದರ್ನಿಂದ ನಾವು ಆಕ್ಸಿಜನ್ ಟ್ಯಾಂಕರ್ ತರಿಸಿಕೊಂಡಿದ್ದೆವು. ಶನಿವಾರವೂ ಆಕ್ಸಿಜನ್ ಸಮಸ್ಯೆ ಇರಲಿಲ್ಲ. ತನಿಖೆಯ ಬಳಿಕವೇ ಸ್ಪಷ್ಟ ಮಾಹಿತಿ ಗೊತ್ತಾಗಲಿದೆ’ ಎಂದರು.