<p><strong>ಕನಕಗಿರಿ: </strong>ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸಿ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಮಾಜ ಬಾಂಧವರು ಸೋಮವಾರ ತಹಶೀಲ್ದಾರ್ ರವಿ ಅಂಗಡಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.</p>.<p>ಸಮಾಜದ ಪ್ರಮುಖರಾದ ಚಂದ್ರೆಗೌಡ ಪಾಟೀಲ, ವೀರೇಶ ದೇವರಾಳ, ಬಸವರಾಜ ಕೋರಿ ಮಾತನಾಡಿ,‘ಪಂಚಮಸಾಲಿ ಸಮಾಜದವರು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ಧಾರೆ. ಅದರಲ್ಲಿ ಶೇ. 90ರಷ್ಟು ಜನರು ಬಡವರಾಗಿದ್ದಾರೆ. ಕೃಷಿ ನಂಬಿ ಜೀವನ ಸಾಗಿಸುತ್ತಿದ್ಧಾರೆ ಎಂದು ತಿಳಿಸಿದ್ದಾರೆ.</p>.<p>2ಎ ಮೀಸಲಾತಿ ಸೌಲಭ್ಯ ನೀಡುವಂತೆ ಅನೇಕ ವರ್ಷಗಳಿಂದಲೂ ಹೋರಾಟ ನಡೆಸಿಕೊಂಡು ಬರುತ್ತಿದ್ದರೂ ಸರ್ಕಾರಗಳು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರದ ನೀತಿಯಿಂದ ಸಮಾಜ ಬಾಂಧವರು ಬೇಸತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಮುಖರಾದ ಶರಣಪ್ಪ ಗುಂಡದ, ಬಸವರಾಜ ಕಲಕೇರಿ, ರಾಜ ಚಿನ್ನೂರು, ವೀರನಗೌಡ ಕಾರಪುಡಿ, ಸಿದ್ದನಗೌಡ, ನಾಗಪ್ಪ, ವಿರೂಪಾಕ್ಷಪ್ಪ ಕಲಕೇರಿ ಹಾಗೂ ಉಮಾಕಾಂತ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಗಿರಿ: </strong>ಪಂಚಮಸಾಲಿ ಸಮಾಜವನ್ನು 2ಎ ಗೆ ಸೇರಿಸಿ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಸಮಾಜ ಬಾಂಧವರು ಸೋಮವಾರ ತಹಶೀಲ್ದಾರ್ ರವಿ ಅಂಗಡಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.</p>.<p>ಸಮಾಜದ ಪ್ರಮುಖರಾದ ಚಂದ್ರೆಗೌಡ ಪಾಟೀಲ, ವೀರೇಶ ದೇವರಾಳ, ಬಸವರಾಜ ಕೋರಿ ಮಾತನಾಡಿ,‘ಪಂಚಮಸಾಲಿ ಸಮಾಜದವರು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ಧಾರೆ. ಅದರಲ್ಲಿ ಶೇ. 90ರಷ್ಟು ಜನರು ಬಡವರಾಗಿದ್ದಾರೆ. ಕೃಷಿ ನಂಬಿ ಜೀವನ ಸಾಗಿಸುತ್ತಿದ್ಧಾರೆ ಎಂದು ತಿಳಿಸಿದ್ದಾರೆ.</p>.<p>2ಎ ಮೀಸಲಾತಿ ಸೌಲಭ್ಯ ನೀಡುವಂತೆ ಅನೇಕ ವರ್ಷಗಳಿಂದಲೂ ಹೋರಾಟ ನಡೆಸಿಕೊಂಡು ಬರುತ್ತಿದ್ದರೂ ಸರ್ಕಾರಗಳು ಗಮನಕ್ಕೆ ತೆಗೆದುಕೊಳ್ಳುತ್ತಿಲ್ಲ. ಸರ್ಕಾರದ ನೀತಿಯಿಂದ ಸಮಾಜ ಬಾಂಧವರು ಬೇಸತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರಮುಖರಾದ ಶರಣಪ್ಪ ಗುಂಡದ, ಬಸವರಾಜ ಕಲಕೇರಿ, ರಾಜ ಚಿನ್ನೂರು, ವೀರನಗೌಡ ಕಾರಪುಡಿ, ಸಿದ್ದನಗೌಡ, ನಾಗಪ್ಪ, ವಿರೂಪಾಕ್ಷಪ್ಪ ಕಲಕೇರಿ ಹಾಗೂ ಉಮಾಕಾಂತ ದೇಸಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>