<p><strong>ಕಮಲಾಪುರ (ಕಲಬುರಗಿ ಜಿಲ್ಲೆ):</strong> ಸಂಬಂಧಿಕರ ಹೆಸರಲ್ಲಿ ಚೆಕ್ ಮೂಲಕ ಸರ್ಕಾರದ ಹಣ ತೆಗೆದುಕೊಂಡು ದುರ್ಬಳಕೆ ಮಾಡಿಕೊಂಡಿರುವುದು ಸಾಬೀತಾಗಿದ್ದರಿಂದ ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮ ಪಂಚಾಯಿತಿಯ ಆರು ಜನ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ.</p><p>ಪಂಚಾಯಿತಿ ಸದಸ್ಯರಾದ ಪ್ರಿಯಾ ಪೀರಪ್ಪ, ನಾಗೇಂದ್ರ ಶಿವಕುಮಾರ, ಚಂದ್ರಕಲಾ ಸಂತೋಷಕುಮಾರ, ಕಲ್ಲಮ್ಮ ಶರಣಬಸಪ್ಪ, ಪ್ರೇಮಾ ಅಂಬಾರಾಯ, ದಶವಂತಿ ಶರಣಬಸಪ್ಪ ಇವರು ತಮ್ಮ ಸಂಬಂಧಿಕರ ಹೆಸರಿಗೆ ಚೆಕ್ ಮೂಲಕ ಹಣ ತೆಗೆದುಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಆರು ಜನರ ಸದಸ್ಯತ್ವ ಅನರ್ಹಗೊಳಿಸಲಾಗಿದೆ.</p><p>ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಬೇಕಿದ್ದ ಹಣವನ್ನು ಈ ಸದಸ್ಯರು ತಮ್ಮ ಪುತ್ರ, ಪತಿ, ಚಿಕ್ಕಪ್ಪನ ಮಗನ ಹೆಸರಿನಲ್ಲಿ ವಿವಿಧ ವರ್ಷಗಳಲ್ಲಿ ₹ 1500ರಿಂದ ₹ 64 ಸಾವಿರದವರೆಗೆ ಚೆಕ್ ಮೂಲಕ ಹಣವನ್ನು ತೆಗೆದುಕೊಂಡು ದುರ್ಬಳಕೆ ಮಾಡಿಕೊಂಡಿದ್ದರು. </p><p>ಆಳಂದ ತಾಲ್ಲೂಕಿನ ಬೆಳಮಗಿ ಗ್ರಾಮದ ರಾಜಕುಮಾರ ಶಾಂತಪ್ಪ ಅವರು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆದಿತ್ತು. ತನಿಖಾ ವರದಿಯನ್ನು ಆಧರಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್ ಅವರು ಸದಸ್ಯತ್ವ ರದ್ದುಗೊಳಿಸಿದ್ದು, ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲಾಪುರ (ಕಲಬುರಗಿ ಜಿಲ್ಲೆ):</strong> ಸಂಬಂಧಿಕರ ಹೆಸರಲ್ಲಿ ಚೆಕ್ ಮೂಲಕ ಸರ್ಕಾರದ ಹಣ ತೆಗೆದುಕೊಂಡು ದುರ್ಬಳಕೆ ಮಾಡಿಕೊಂಡಿರುವುದು ಸಾಬೀತಾಗಿದ್ದರಿಂದ ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮ ಪಂಚಾಯಿತಿಯ ಆರು ಜನ ಸದಸ್ಯರ ಸದಸ್ಯತ್ವವನ್ನು ರದ್ದುಗೊಳಿಸಲಾಗಿದೆ.</p><p>ಪಂಚಾಯಿತಿ ಸದಸ್ಯರಾದ ಪ್ರಿಯಾ ಪೀರಪ್ಪ, ನಾಗೇಂದ್ರ ಶಿವಕುಮಾರ, ಚಂದ್ರಕಲಾ ಸಂತೋಷಕುಮಾರ, ಕಲ್ಲಮ್ಮ ಶರಣಬಸಪ್ಪ, ಪ್ರೇಮಾ ಅಂಬಾರಾಯ, ದಶವಂತಿ ಶರಣಬಸಪ್ಪ ಇವರು ತಮ್ಮ ಸಂಬಂಧಿಕರ ಹೆಸರಿಗೆ ಚೆಕ್ ಮೂಲಕ ಹಣ ತೆಗೆದುಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಆರು ಜನರ ಸದಸ್ಯತ್ವ ಅನರ್ಹಗೊಳಿಸಲಾಗಿದೆ.</p><p>ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಬೇಕಿದ್ದ ಹಣವನ್ನು ಈ ಸದಸ್ಯರು ತಮ್ಮ ಪುತ್ರ, ಪತಿ, ಚಿಕ್ಕಪ್ಪನ ಮಗನ ಹೆಸರಿನಲ್ಲಿ ವಿವಿಧ ವರ್ಷಗಳಲ್ಲಿ ₹ 1500ರಿಂದ ₹ 64 ಸಾವಿರದವರೆಗೆ ಚೆಕ್ ಮೂಲಕ ಹಣವನ್ನು ತೆಗೆದುಕೊಂಡು ದುರ್ಬಳಕೆ ಮಾಡಿಕೊಂಡಿದ್ದರು. </p><p>ಆಳಂದ ತಾಲ್ಲೂಕಿನ ಬೆಳಮಗಿ ಗ್ರಾಮದ ರಾಜಕುಮಾರ ಶಾಂತಪ್ಪ ಅವರು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆದಿತ್ತು. ತನಿಖಾ ವರದಿಯನ್ನು ಆಧರಿಸಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸೈಯದ್ ಪಟೇಲ್ ಅವರು ಸದಸ್ಯತ್ವ ರದ್ದುಗೊಳಿಸಿದ್ದು, ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>