<p><strong>ಸೇಡಂ</strong>: ‘ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ಜೊತೆಗೆ ಪಾಲಕರ ಸಹಕಾರ ಅಗತ್ಯವಿದೆ’ ಎಂದು ಪ್ರಾಚಾರ್ಯೆ ಶೋಭಾರಾಣಿ ಪಾಟೀಲ ಅಭಿಪ್ರಾಯಪಟ್ಟರು.</p>.<p>ಪಟ್ಟಣ ಹೊರವಲಯದಲ್ಲಿರುವ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ವಿದ್ಯಾಮಂದಿರ ಸಿಬಿಎಸ್ಇ ಆಂಗ್ಲಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ತಂದೆಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಾಲಾ ತರಗತಿಯಲ್ಲಿ ಪಠ್ಯಕ್ಕೆ ಸಂಬಂಧಿಸಿರುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಹೇಳಲಾಗುತ್ತದೆ. ತರಗತಿಯಲ್ಲಿ ಹೇಳಿರುವ ಅಂಶಗಳನ್ನು ಮಕ್ಕಳು ಪಾಲಿಸುತ್ತಿದ್ದಾರೆಯೇ ಎನ್ನುವುದರತ್ತ ಗಮನ ಹರಿಸಿ, ಅವರ ಶೈಕ್ಷಣಿಕ ಪ್ರಗತಿಯತ್ತ ಗಮನ ಹರಿಸಬೇಕು. ಮಕ್ಕಳ ಏಳಿಗೆಯಲ್ಲಿ ಶಿಕ್ಷಕರಷ್ಟೇ ತಂದೆ– ತಾಯಿ ಪಾತ್ರ ಅಮೂಲ್ಯವಾಗಿದೆ’ ಎಂದರು.</p>.<p>ಮುಖಂಡ ಚಂದ್ರಶೇಖರೆಡ್ಡಿ ಪಾಟೀಲ ಮಾತನಾಡಿ, ‘ಪಾಲಕರು ತಮ್ಮ ಮಕ್ಕಳನ್ನು ದೇಶದ ಭವಿಷ್ಯ ನಾಗರಿಕರನ್ನಾಗಿ ಮಾಡುವ ಉದ್ದೇಶ ಹೊಂದಿರಬೇಕು. ಜೊತೆಗೆ ಮಕ್ಕಳ ಬೆಳವಣಿಗೆ ಹಾಗೂ ಗುರಿ ಸಾಧನೆಯತ್ತ ಪ್ರೋತ್ಸಾಹಿಸಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಪಾಲಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜಯಶಾಲಿಯಾದ ಪಾಲಕರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರಾದ ಅನಿತಾ ಹರಸೂರ, ಜಯಶ್ರೀ, ಸುಷ್ಮಾ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಡಂ</strong>: ‘ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಿಕ್ಷಕರ ಜೊತೆಗೆ ಪಾಲಕರ ಸಹಕಾರ ಅಗತ್ಯವಿದೆ’ ಎಂದು ಪ್ರಾಚಾರ್ಯೆ ಶೋಭಾರಾಣಿ ಪಾಟೀಲ ಅಭಿಪ್ರಾಯಪಟ್ಟರು.</p>.<p>ಪಟ್ಟಣ ಹೊರವಲಯದಲ್ಲಿರುವ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸಂಚಾಲಿತ ವಿದ್ಯಾಮಂದಿರ ಸಿಬಿಎಸ್ಇ ಆಂಗ್ಲಮಾಧ್ಯಮ ಶಾಲೆಯಲ್ಲಿ ಈಚೆಗೆ ನಡೆದ ತಂದೆಯರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶಾಲಾ ತರಗತಿಯಲ್ಲಿ ಪಠ್ಯಕ್ಕೆ ಸಂಬಂಧಿಸಿರುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ಹೇಳಲಾಗುತ್ತದೆ. ತರಗತಿಯಲ್ಲಿ ಹೇಳಿರುವ ಅಂಶಗಳನ್ನು ಮಕ್ಕಳು ಪಾಲಿಸುತ್ತಿದ್ದಾರೆಯೇ ಎನ್ನುವುದರತ್ತ ಗಮನ ಹರಿಸಿ, ಅವರ ಶೈಕ್ಷಣಿಕ ಪ್ರಗತಿಯತ್ತ ಗಮನ ಹರಿಸಬೇಕು. ಮಕ್ಕಳ ಏಳಿಗೆಯಲ್ಲಿ ಶಿಕ್ಷಕರಷ್ಟೇ ತಂದೆ– ತಾಯಿ ಪಾತ್ರ ಅಮೂಲ್ಯವಾಗಿದೆ’ ಎಂದರು.</p>.<p>ಮುಖಂಡ ಚಂದ್ರಶೇಖರೆಡ್ಡಿ ಪಾಟೀಲ ಮಾತನಾಡಿ, ‘ಪಾಲಕರು ತಮ್ಮ ಮಕ್ಕಳನ್ನು ದೇಶದ ಭವಿಷ್ಯ ನಾಗರಿಕರನ್ನಾಗಿ ಮಾಡುವ ಉದ್ದೇಶ ಹೊಂದಿರಬೇಕು. ಜೊತೆಗೆ ಮಕ್ಕಳ ಬೆಳವಣಿಗೆ ಹಾಗೂ ಗುರಿ ಸಾಧನೆಯತ್ತ ಪ್ರೋತ್ಸಾಹಿಸಬೇಕು’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಪಾಲಕರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜಯಶಾಲಿಯಾದ ಪಾಲಕರಿಗೆ ಬಹುಮಾನ ವಿತರಿಸಲಾಯಿತು. ಶಿಕ್ಷಕರಾದ ಅನಿತಾ ಹರಸೂರ, ಜಯಶ್ರೀ, ಸುಷ್ಮಾ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>