<p><strong>ಕಲಬುರಗಿ</strong>: ವಾಡಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ತರುಣ ಸಂಘ ಹಾಗೂ ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆ (ಐಬಿವೈಒ) ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ (ಪರಿನಿಬ್ಬಾಣ) ದಿನದ ನಿಮಿತ್ತ ನ.27ರಿಂದ ಡಿ.6ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಭಂತೆ ಬುದ್ಧರತ್ನ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.27ರಂದು ಚಿತ್ತಾಪುರ ತಾಲ್ಲೂಕು ಮಟ್ಟದಲ್ಲಿ 9ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹10 ಸಾವಿರ, ದ್ವಿತೀಯ ₹5 ಸಾವಿರ ಹಾಗೂ ತೃತೀಯ ಬಹುಮಾನ ₹2,500 ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹5 ಸಾವಿರ, ದ್ವಿತೀಯ ₹3 ಸಾವಿರ ಹಾಗೂ ತೃತೀಯ ಬಹುಮಾನ ₹1,500 ನಗದು ನೀಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ನ.28ರಂದು ವಾಡಿಯ ಅಂಬೇಡ್ಕರ್ ಕಾಲೊನಿಯಲ್ಲಿರುವ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಆರೋಗ್ಯ<br />ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿದೆ. ಡಿ.6ರಂದು ಡಾ.ಬಿ. ಆರ್.ಅಂಬೇಡ್ಕರ್ ವೃತ್ತದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಮಾಹಿತಿಗೆ ಮೊ: 9008236882 ಹಾಗೂ 7090638562 ಸಂಪರ್ಕಿಸಬಹುದು ಎಂದು ಅವರು ಹೇಳಿದರು.</p>.<p>ಮುಖಂಡರಾದ ರಣಧೀರ ಹೊಸಮನಿ, ಸಂದೀಪ ಕಟ್ಟಿ, ಸಾಯಿನಾಥ ಪರಶುರಾಮ, ಪರಶುರಾಮ ಮಂಗಳೂರಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ</strong>: ವಾಡಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ತರುಣ ಸಂಘ ಹಾಗೂ ಅಂತರರಾಷ್ಟ್ರೀಯ ಬೌದ್ಧ ಯುವ ಸಂಘಟನೆ (ಐಬಿವೈಒ) ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ (ಪರಿನಿಬ್ಬಾಣ) ದಿನದ ನಿಮಿತ್ತ ನ.27ರಿಂದ ಡಿ.6ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಭಂತೆ ಬುದ್ಧರತ್ನ ತಿಳಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.27ರಂದು ಚಿತ್ತಾಪುರ ತಾಲ್ಲೂಕು ಮಟ್ಟದಲ್ಲಿ 9ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಆಯೋಜಿಸಲಾಗಿದೆ. ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹10 ಸಾವಿರ, ದ್ವಿತೀಯ ₹5 ಸಾವಿರ ಹಾಗೂ ತೃತೀಯ ಬಹುಮಾನ ₹2,500 ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ₹5 ಸಾವಿರ, ದ್ವಿತೀಯ ₹3 ಸಾವಿರ ಹಾಗೂ ತೃತೀಯ ಬಹುಮಾನ ₹1,500 ನಗದು ನೀಡಲಾಗುವುದು ಎಂದು ಮಾಹಿತಿ ನೀಡಿದರು.</p>.<p>ನ.28ರಂದು ವಾಡಿಯ ಅಂಬೇಡ್ಕರ್ ಕಾಲೊನಿಯಲ್ಲಿರುವ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಆರೋಗ್ಯ<br />ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿದೆ. ಡಿ.6ರಂದು ಡಾ.ಬಿ. ಆರ್.ಅಂಬೇಡ್ಕರ್ ವೃತ್ತದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಮಾಹಿತಿಗೆ ಮೊ: 9008236882 ಹಾಗೂ 7090638562 ಸಂಪರ್ಕಿಸಬಹುದು ಎಂದು ಅವರು ಹೇಳಿದರು.</p>.<p>ಮುಖಂಡರಾದ ರಣಧೀರ ಹೊಸಮನಿ, ಸಂದೀಪ ಕಟ್ಟಿ, ಸಾಯಿನಾಥ ಪರಶುರಾಮ, ಪರಶುರಾಮ ಮಂಗಳೂರಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>