ಭಾರತೀಯ ರೈಲ್ವೆಯು ಮಂಗಳವಾರ 196 ಹೆಚ್ಚುವರಿ ವಿಶೇಷ ರೈಲುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಗೆ ಬೆಂಗಳೂರಿನಿಂದ ಯಾವುದೇ ರೈಲುಗಳಿಲ್ಲ. ಆದರೆ, ಬೆಂಗಳೂರಿನಿಂದ ಮುಂಬೈ, ಹುಬ್ಬಳ್ಳಿ ಹಾಗೂ ಮೈಸೂರಿಗೆ ನೈರುತ್ಯ ರೈಲ್ವೆಯು ವಿಶೇಷ ರೈಲುಗಳನ್ನು ಓಡಿಸಲಿದೆ. ಮೊದಲೇ ಆರ್ಥಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ರೈಲ್ವೆ ಇಲಾಖೆ ಅನ್ಯಾಯ ಮಾಡಿದೆ ಎಂದು ಈ ಭಾಗದ ಸಾಮಾಜಿಕ ಹೋರಾಟಗಾರರು ಬೇಸರ ಹೊರಹಾಕಿದ್ದಾರೆ.