ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ, ರಾಮೇಶ್ವರ ಕೆಫೆಯಲ್ಲಿ ಸ್ಫೋಟ ಪ್ರಕರಣ ಸೇರಿದಂತೆ ಇಂಥ ಪ್ರಕರಣಗಳಲ್ಲಿ ನಮ್ಮವರೋ, ಇನ್ನೊಬ್ಬರೋ ಎಂಬ ವಿಷಯ ಮುಖ್ಯವಲ್ಲ. ಇಂಥದಕ್ಕೆ ಕ್ಷಮೆ ಇರುವುದಿಲ್ಲ. ಕಾನೂನಿನ ಚೌಕಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದು ಖಚಿತ’ ಎಂದರು.