ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಡಿಒ, ಗ್ರಾಮ ಲೆಕ್ಕಿಗ ಅಮಾನತು

ಕಾಳಜಿ ಕೇಂದ್ರದ ನಿರ್ವಹಣೆಯಲ್ಲಿ ಕರ್ತವ್ಯ ಲೋಪ
Last Updated 19 ಅಕ್ಟೋಬರ್ 2020, 3:19 IST
ಅಕ್ಷರ ಗಾತ್ರ

ಅಫಜಲಪುರ: ತಾಲ್ಲೂಕಿನ ದೇವಲಗಾಣಗಾಪುರದ ಯಾತ್ರಿ ನಿವಾಸದಲ್ಲಿ ಪ್ರಾರಂಭಿಸಿರುವ ಕಾಳಜಿ ಕೇಂದ್ರದಲ್ಲಿನ ಪ್ರವಾಹ ಸಂತ್ರಸ್ತರ ದೂರಿನ ಮೇರೆಗೆ ಕರ್ತವ್ಯ ಲೋಪಕ್ಕಾಗಿ ಅಭಿವೃದ್ಧಿ ಅಧಿಕಾರಿ ಗುರುನಾಥ ಹರಿದಾಸ ಹಾಗೂ ಗ್ರಾಮ ಲೆಕ್ಕಾಧಿಕಾರಿ ಭಾಗ್ಯಶ್ರೀ ಎಳವಾರ ಅವರನ್ನು ಜಿಲ್ಲಾಧಿಕಾರಿ ವಿ.ವಿ ಜ್ಯೋತ್ನ್ಸಾ ಅಮಾನತುಗೊಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದಾಗ ಸಂತ್ರಸ್ತರು ಅಲ್ಲಿಯ ಅವ್ಯವಸ್ಥೆ ಬಗ್ಗೆ ದೂರು ನೀಡಿದರು. ಸರಿಯಾಗಿ ಊಟ ಹಾಕುವುದಿಲ್ಲ, ಅನ್ನದಲ್ಲಿ ಹುಳ ಇರುತ್ತವೆ, ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ ಎಂದು ತಿಳಿಸಿದರು. ಹೀಗಾಗಿ ಸ್ಥಳದಲ್ಲಿಯೇ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಿಗರನ್ನು ಅಮಾನತು ಮಾಡಿದರು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT