ಜಿಲ್ಲಾಧಿಕಾರಿಗಳು ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದಾಗ ಸಂತ್ರಸ್ತರು ಅಲ್ಲಿಯ ಅವ್ಯವಸ್ಥೆ ಬಗ್ಗೆ ದೂರು ನೀಡಿದರು. ಸರಿಯಾಗಿ ಊಟ ಹಾಕುವುದಿಲ್ಲ, ಅನ್ನದಲ್ಲಿ ಹುಳ ಇರುತ್ತವೆ, ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ ಎಂದು ತಿಳಿಸಿದರು. ಹೀಗಾಗಿ ಸ್ಥಳದಲ್ಲಿಯೇ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಿಗರನ್ನು ಅಮಾನತು ಮಾಡಿದರು ಎಂದು ತಿಳಿದು ಬಂದಿದೆ.