ತಾಲ್ಲೂಕಿನ ಸರಸಂಬಾ ಗ್ರಾಮದ ಮತಗಟ್ಟೆ ಕೇಂದ್ರದಲ್ಲಿ ಮುಖ್ಯಮಂತ್ರಿ ಸಲಹೆಗಾರ, ಶಾಸಕ ಬಿ.ಆರ್.ಪಾಟೀಲ ಅವರು ಕುಟುಂಬ ಸಮೇತ ಮತ ಚಲಾಯಿಸಿದರು. ಮಾಜಿ ಶಾಸಕ ಸುಭಾಷ ಗುತ್ತೇದಾರ ಅವರು ತಡಕಲ ಗ್ರಾಮದ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದರೆ, ಅಭಿನವ ಶಿವಲಿಂಗ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ ಮಾದನ ಹಿಪ್ಪರಗಿ ಮತಗಟ್ಟೆ ಕೇಂದ್ರದಲ್ಲಿ ಮತ ಚಲಾಯಿಸಿದರು. ಹಿರೇಮಠದ ಸಿದ್ದೇಶ್ವರ ಸ್ವಾಮೀಜಿ, ಚನ್ನಬಸವ ಪಟ್ಟದೇವರು ಆಳಂದದ ಮತಗಟ್ಟೆ ಕೇಂದ್ರದಲ್ಲಿ ತಮ್ಮ ಮತದಾನ ಮಾಡಿದರು.