ನಗರ ಹಾಗೂ ವಿವಿಧ ತಾಲ್ಲೂಕುಗಳಲ್ಲಿನ ಕಿರಾಣಿ ಬಜಾರ್, ಸೂಪುರ್ ಮಾರ್ಕೆಟ್, ಎಪಿಎಂಸಿ, ನೆಹರೂ ಗಂಜ್ನ ಸಟಗು ಹಾಗೂ ಚಿಲ್ಲರೆ ವ್ಯಾಪಾರಸ್ಥರ ಮಳಿಗೆಗಳ ತಪಾಸಣೆ ನಡೆಸಿದ್ದಾರೆ. ಪೊಟ್ಟಣ ಸಾಮಗ್ರಿ ಅಧಿನಿಯಮ 2011ರ ಉಲ್ಲಂಘನೆ ಮಾಡಿದ ಕೆಲವು ಅಂಗಡಿಕಾರರ ಮೇಲೆ ಅಭಿಸಂದಾನದ ದಂಡ ವಿಧಿಸಲಾಗಿದೆ ಎಂದು ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರಫೀಕಸಾಬ್ ಲಾಡಜಿ ಅವರು ತಿಳಿಸಿದ್ದಾರೆ.