ಪಾಲಿಕೆ ಸಾಮಾನ್ಯ ಸಭೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿದರು. ವಿಧಾನಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಹಾಗೂ ಪಾಲಿಕೆ ಸದಸ್ಯರು ಇದ್ದರು
ಮಹಾನಗರ ಪಾಲಿಕೆಯ 477 ಪೌರ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿರುವುದರಿಂದ ಕಸ ವಿಲೇವಾರಿಯಲ್ಲಿ ವ್ಯತ್ಯಯವಾಗಿದೆ. ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಂಡು ನ್ಯಾಯ ಒದಗಿಸಬೇಕು
ಅಲ್ಲಮಪ್ರಭು ಪಾಟೀಲ ಶಾಸಕ
ಅಧಿಕಾರಿಗಳು ಎಲ್ ಅಂಡ್ ಟಿ ಕಂಪನಿ ಮಾಡುತ್ತಿರುವ ಕಳ್ಳಾಟದಲ್ಲಿ ಭಾಗಿಯಾಗಬಾರದು. ಕುಡಿಯುವ ನೀರು ಕೊಡುವುದು ಪುಣ್ಯದ ಕೆಲಸ. ಇದರಲ್ಲಿ ಎಡವಿದರೆ ಜನರ ಶಾಪ ನಿಮ್ಮ ಮಕ್ಕಳಿಗೆ ತಟ್ಟುತ್ತದೆ
ತಿಪ್ಪಣ್ಣಪ್ಪ ಕಮಕನೂರ ವಿಧಾನಪರಿಷತ್ ಸದಸ್ಯ
ಎಲ್ಲೆಲ್ಲಿ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಿದೆಯೋ ಅಲ್ಲಿ ಟ್ಯಾಂಕರ್ ನೀರನ್ನು ಎಲ್ ಅಂಡ್ ಟಿ ಕಂಪನಿ ಪೂರೈಸಬೇಕು. ಇಂತಹ ಸಮಸ್ಯೆಗಳಿರುವ ಜಾಗಕ್ಕೆ ಸ್ವತಃ ಭೇಟಿ ನೀಡುತ್ತೇನೆ
ವಿಶಾಲ ದರ್ಗಿ ಮೇಯರ್
ಪಾಲಿಕೆಯ ಜೆಇ ವಾಲ್ವ್ಮನ್ಗಳ ನೆರವು ಪಡೆದು ಜನರಿಗೆ ತೊಂದರೆಯಾಗದಂತೆ ನೀರು ಪೂರೈಸಬೇಕು. ಮುಂದೆಯೂ ಸುಧಾರಿಸದಿದ್ದರೆ ಕಂಪನಿ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಬೇಕಾಗುತ್ತದೆ