ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚುನಾವಣೆ ಸಮಿತಿಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ಎಆರ್ಒಗಳು, ನೋಡಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ‘ವಿಶೇಷವಾಗಿ ಅಂತರ ರಾಜ್ಯ ಗಡಿಯಲ್ಲಿ ಕಟ್ಟೆಚ್ಚರ ವಹಿಸಬೇಕು. ವಾಹನಗಳಲ್ಲಿ ಅಕ್ರಮವಾಗಿ ಹಣ, ವಸ್ತುಗಳನ್ನು ಸಾಗಿಸುತ್ತಿದ್ದಲ್ಲಿ ಜಪ್ತಿ ಮಾಡಬೇಕು’ ಎಂದರು.