ಯಡ್ರಾಮಿ: ತಾಲ್ಲೂಕಿನ ಸುಂಬಡ ಗ್ರಾಮದ ಸಮೀಪ ಗುರುವಾರ ತಡರಾತ್ರಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮಲ್ಲಿಕಾರ್ಜುನ ಈರಣ್ಣ ಬಿಜಾಪುರ (32) ಮೃತಪಟ್ಟವರು.
10 ತಿಂಗಳ ಹಿಂದಷ್ಟೇ ಅವರಿಗೆ ಮದುವೆಯಾಗಿದೆ. ಪತ್ನಿ ನೋಡಲು ಗುರುವಾರ ಸುಂಬಡಕ್ಕೆ ಬರುತ್ತಿರುವ ವೇಳೆ ಕತ್ತಲಲ್ಲಿ ಕಾರು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರಣ ಅವಘಡ ಸಂಭವಿಸಿದೆ. ಶುಕ್ರವಾರ ಬೆಳಿಗ್ಗೆ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.