<p><strong>ಕಲಬುರ್ಗಿ: </strong>ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ 9 ಪಿಎಚ್.ಡಿ. ಸೀಟುಗಳಿಗೆ ಗುರುವಾರ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಲಕೋಟೆಯಿಂದ ಬಿಚ್ಚದೇ ಹಾಗೆಯೇ ಕೊಡಲಾಗಿದೆ. ಈಗಾಗಲೇ ತಮಗೆ ಬೇಕಾದವರಿಗೆ ಪ್ರಶ್ನೆಪತ್ರಿಕೆಯನ್ನು ಬಹಿರಂಗ ಮಾಡಲಾಗಿದೆ ಎಂದು ಆರೋಪಿಸಿ 190ಕ್ಕೂ ಅಧಿಕ ಅಭ್ಯರ್ಥಿಗಳು ಮೌಲ್ಯಮಾಪನ ಕುಲಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಪಿಎಚ್.ಡಿ. ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ವಿಶ್ವವಿದ್ಯಾಲಯ ವಿಫಲವಾಗಿದೆ. ಪ್ರಶ್ನೆಪತ್ರಿಕೆ ಬಹಿರಂಗಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೌಲ್ಯಮಾಪನ ಕುಲಸಚಿವ ಪ್ರೊ.ಸಂಜೀವಕುಮಾರ್ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಮೊದಲ ಬಾರಿ ಪ್ರವೇಶ ಪರೀಕ್ಷೆ ನಡೆದಾಗ ಪ್ರಶ್ನೆಪತ್ರಿಕೆಯನ್ನು ಕನ್ನಡ ಭಾಷೆಯಲ್ಲಿ ಕೊಡುವ ಬದಲು ಬರೀ ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆಯನ್ನು ಮಾತ್ರ ಕೊಡಲಾಗಿತ್ತು. ಹೀಗಾಗಿ ಮುಂದೂಡಲಾಗಿತ್ತು.</p>.<p>ಎರಡನೇ ಬಾರಿ ಪರೀಕ್ಷೆ ನಡೆದ ಬಳಿಕ ನೀಡಲಾದ ಕೀ ಉತ್ತರದಲ್ಲಿ ಶೇ 80ರಷ್ಟು ಉತ್ತರಗಳು ತಪ್ಪಿದ್ದವು. ಅದನ್ನು ಸರಿಪಡಿಸಿ ಮತ್ತೆ ಪ್ರಕಟಿಸುವ ಬದಲು ಪರೀಕ್ಷೆಯನ್ನೇ ಮುಂದೂಡಲಾಗಿತ್ತು.</p>.<p>ಇದೀಗ ಮೂರನೇ ಬಾರಿಗೆ ಪ್ರಶ್ನೆಪತ್ರಿಕೆಯನ್ನು ಬಹಿರಂಗಗೊಳಿಸಿದ ಆರೋಪಗಳು ಕೇಳಿ ಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ 9 ಪಿಎಚ್.ಡಿ. ಸೀಟುಗಳಿಗೆ ಗುರುವಾರ ನಡೆದ ಪರೀಕ್ಷೆಯ ಪ್ರಶ್ನೆಪತ್ರಿಕೆಯನ್ನು ಲಕೋಟೆಯಿಂದ ಬಿಚ್ಚದೇ ಹಾಗೆಯೇ ಕೊಡಲಾಗಿದೆ. ಈಗಾಗಲೇ ತಮಗೆ ಬೇಕಾದವರಿಗೆ ಪ್ರಶ್ನೆಪತ್ರಿಕೆಯನ್ನು ಬಹಿರಂಗ ಮಾಡಲಾಗಿದೆ ಎಂದು ಆರೋಪಿಸಿ 190ಕ್ಕೂ ಅಧಿಕ ಅಭ್ಯರ್ಥಿಗಳು ಮೌಲ್ಯಮಾಪನ ಕುಲಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.</p>.<p>ಪಿಎಚ್.ಡಿ. ಪ್ರವೇಶ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವಲ್ಲಿ ವಿಶ್ವವಿದ್ಯಾಲಯ ವಿಫಲವಾಗಿದೆ. ಪ್ರಶ್ನೆಪತ್ರಿಕೆ ಬಹಿರಂಗಪಡಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮೌಲ್ಯಮಾಪನ ಕುಲಸಚಿವ ಪ್ರೊ.ಸಂಜೀವಕುಮಾರ್ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಮೊದಲ ಬಾರಿ ಪ್ರವೇಶ ಪರೀಕ್ಷೆ ನಡೆದಾಗ ಪ್ರಶ್ನೆಪತ್ರಿಕೆಯನ್ನು ಕನ್ನಡ ಭಾಷೆಯಲ್ಲಿ ಕೊಡುವ ಬದಲು ಬರೀ ಇಂಗ್ಲಿಷ್ ಭಾಷೆಯಲ್ಲಿ ಪ್ರಶ್ನೆಪತ್ರಿಕೆಯನ್ನು ಮಾತ್ರ ಕೊಡಲಾಗಿತ್ತು. ಹೀಗಾಗಿ ಮುಂದೂಡಲಾಗಿತ್ತು.</p>.<p>ಎರಡನೇ ಬಾರಿ ಪರೀಕ್ಷೆ ನಡೆದ ಬಳಿಕ ನೀಡಲಾದ ಕೀ ಉತ್ತರದಲ್ಲಿ ಶೇ 80ರಷ್ಟು ಉತ್ತರಗಳು ತಪ್ಪಿದ್ದವು. ಅದನ್ನು ಸರಿಪಡಿಸಿ ಮತ್ತೆ ಪ್ರಕಟಿಸುವ ಬದಲು ಪರೀಕ್ಷೆಯನ್ನೇ ಮುಂದೂಡಲಾಗಿತ್ತು.</p>.<p>ಇದೀಗ ಮೂರನೇ ಬಾರಿಗೆ ಪ್ರಶ್ನೆಪತ್ರಿಕೆಯನ್ನು ಬಹಿರಂಗಗೊಳಿಸಿದ ಆರೋಪಗಳು ಕೇಳಿ ಬಂದಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>