<p><strong>ಕಲಬುರ್ಗಿ: </strong>ನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿರುವ ನಗರ ಪೊಲೀಸರು, ಶುಕ್ರವಾರ ಆರೋಪಿಯನ್ನು ಬಂಧಿಸಿ ಒಂದು ಪಿಸ್ತೂಲ್ ಹಾಗೂ ಕಳವು ಮಾಡಿದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.</p>.<p>ವಿವೇಕಾನಂದ ಅಲಿಯಾಸ್ ಉಮೇಶ ಮಲ್ಲೆ ಖಾನಾಪುರ (23) ಬಂಧಿತ ಯುವಕ. ಆಳಂದ ತಾಲ್ಲೂಕಿನ ಬೆಳಮಗಿ ಗ್ರಾಮದ ನಿವಾಸಿ. ಆರೋಪಿಯಿಂದ ₹ 1.20 ಲಕ್ಷ ಮೌಲ್ಯದ ಪಿಸ್ತೂಲ್, ಎರಡು ಜೀವಂತ ಗುಂಡುಗಳು, ₹ 5.7 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.</p>.<p>ಇಲ್ಲಿನ ಶಹಾ ಬಜಾರ್ನಲ್ಲಿರುವ ಮಲ್ಲಿಕಾರ್ಜುನ ಖೇಮಜಿ ಎಂಬುವವರ ಮನೆಯಲ್ಲಿ ಈಚೆಗೆ ಕಳ್ಳತನ ಮಾಡಲಾಗಿತ್ತು. ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು ಬೆಳಮಗಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.</p>.<p>ನಗರ ಪೊಲೀಸ್ ಕಮಿಷನರ್ ಸತೀಶಕುಮಾರ, ಡಿಸಿಪಿಗಳಾದ ಕಿಶೋರಬಾಬು, ಶ್ರೀಕಾಂತ ಕಟ್ಟಿಮನಿ, ಎಸಿಪಿ ಗಿರೀಶ ಎಸ್.ಬಿ ಮಾರ್ಗದರ್ಶನಲ್ಲಿ ಚೌಕ್ ಠಾಣೆಯ ಇನ್ಸ್ಪೆಕ್ಟರ್<br />ಎಸ್.ಆರ್.ನಾಯಕ ಮತ್ತು ಸಿಬ್ಬಂದಿ ಕೇಶುರಾಯ, ಸಿದ್ರಾಮಯ್ಯ, ಅಶೋಕ, ಉಮೇಶ ಅವರು ಕಾರ್ಯಾಚರಣೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿರುವ ನಗರ ಪೊಲೀಸರು, ಶುಕ್ರವಾರ ಆರೋಪಿಯನ್ನು ಬಂಧಿಸಿ ಒಂದು ಪಿಸ್ತೂಲ್ ಹಾಗೂ ಕಳವು ಮಾಡಿದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.</p>.<p>ವಿವೇಕಾನಂದ ಅಲಿಯಾಸ್ ಉಮೇಶ ಮಲ್ಲೆ ಖಾನಾಪುರ (23) ಬಂಧಿತ ಯುವಕ. ಆಳಂದ ತಾಲ್ಲೂಕಿನ ಬೆಳಮಗಿ ಗ್ರಾಮದ ನಿವಾಸಿ. ಆರೋಪಿಯಿಂದ ₹ 1.20 ಲಕ್ಷ ಮೌಲ್ಯದ ಪಿಸ್ತೂಲ್, ಎರಡು ಜೀವಂತ ಗುಂಡುಗಳು, ₹ 5.7 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ.</p>.<p>ಇಲ್ಲಿನ ಶಹಾ ಬಜಾರ್ನಲ್ಲಿರುವ ಮಲ್ಲಿಕಾರ್ಜುನ ಖೇಮಜಿ ಎಂಬುವವರ ಮನೆಯಲ್ಲಿ ಈಚೆಗೆ ಕಳ್ಳತನ ಮಾಡಲಾಗಿತ್ತು. ಮಾಹಿತಿ ಆಧರಿಸಿ ದಾಳಿ ಮಾಡಿದ ಪೊಲೀಸರು ಬೆಳಮಗಿ ಗ್ರಾಮದಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.</p>.<p>ನಗರ ಪೊಲೀಸ್ ಕಮಿಷನರ್ ಸತೀಶಕುಮಾರ, ಡಿಸಿಪಿಗಳಾದ ಕಿಶೋರಬಾಬು, ಶ್ರೀಕಾಂತ ಕಟ್ಟಿಮನಿ, ಎಸಿಪಿ ಗಿರೀಶ ಎಸ್.ಬಿ ಮಾರ್ಗದರ್ಶನಲ್ಲಿ ಚೌಕ್ ಠಾಣೆಯ ಇನ್ಸ್ಪೆಕ್ಟರ್<br />ಎಸ್.ಆರ್.ನಾಯಕ ಮತ್ತು ಸಿಬ್ಬಂದಿ ಕೇಶುರಾಯ, ಸಿದ್ರಾಮಯ್ಯ, ಅಶೋಕ, ಉಮೇಶ ಅವರು ಕಾರ್ಯಾಚರಣೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>