<p><strong>ನಿಂಬರ್ಗಾ (ಆಳಂದ): </strong>ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಕೊಲೆಗೆ ಸಂಬಂಧಿಸಿದಂತೆ ಬುಧವಾರ ನಿಂಬರ್ಗಾ ಪೊಲೀಸ್ರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕಳೆದ ಫೆಬ್ರುವರಿ 16ರಂದು ಪಟ್ಟಣ ಕ್ರಾಸ್ ಸಮೀಪದ ಮುಖ್ಯರಸ್ತೆಯಲ್ಲಿ ಆಳಂದ ತಾಲ್ಲೂಕಿನ ಧಂಗಾಪುರ ಗ್ರಾಮದ ನಿವಾಸಿ ರವಿ ಸುಭಾಷ ನೀಲೂರು (35) ಕೊಲೆ ನಡೆದಿತ್ತು. ಈ ಕೊಲೆಯ ತನಿಖೆ ನಡೆಸತ್ತಿದ್ದ ಪೊಲೀಸರು ಬುಧವಾರ ಅಫಜಲಪುರ ತಾಲ್ಲೂಕಿನ ಬಡದಾಳದ ನಿವಾಸಿಗಳಾದ ಹುಚ್ಚಪ್ಪ ಶಿವಪ್ಪ ಬಸರಿಗಿಡ, ಲಾಡಪ್ಪ ಮಹಾದೇವಪ್ಪ ಉದಯಕರ, ಘತ್ತರಗಿಯ ಬಸವರಾಜ ಶರಣಪ್ಪ ಸಿಂಗೆ ಹಾಗೂ ಮೃತ ವ್ಯಕ್ತಿಯ ಪತ್ನಿ ಚಂದ್ರಕಲಾ ರವಿ ನೀಲೂರು ಅವರನ್ನು ಬಂಧಿಸಿದ್ದಾರೆ.</p>.<p>‘ಆರೋಪಿ ಹುಚ್ಚಪ್ಪ ಬಸರಿಗಿಡ ಜತೆ ಮೃತ ವ್ಯಕ್ತಿಯ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಳು. ಇವರಿಬ್ಬರು ಸಂಚು ರೂಪಿಸಿ ಪ್ರಿಯಕರ ಹುಚ್ಚಪ್ಪ ತನ್ನ ಸಂಗಡಿಗರ ಜೊತೆಗೂಡಿ ಪತಿ ರವಿ ನೀಲೂರು ಅವರನ್ನು ಕೊಲೆ ಮಾಡಿರುವುದು ವಿಚಾರಣೆಯಲ್ಲಿ ಹೊರ ಬಿದ್ದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಮಂಜುನಾಥ, ಪಿಎಸ್ಐ ಸುವರ್ಣಾ ಮಲಶೆಟ್ಟಿ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಿಂಬರ್ಗಾ (ಆಳಂದ): </strong>ತಾಲ್ಲೂಕಿನ ನಿಂಬರ್ಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬನ ಕೊಲೆಗೆ ಸಂಬಂಧಿಸಿದಂತೆ ಬುಧವಾರ ನಿಂಬರ್ಗಾ ಪೊಲೀಸ್ರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.</p>.<p>ಕಳೆದ ಫೆಬ್ರುವರಿ 16ರಂದು ಪಟ್ಟಣ ಕ್ರಾಸ್ ಸಮೀಪದ ಮುಖ್ಯರಸ್ತೆಯಲ್ಲಿ ಆಳಂದ ತಾಲ್ಲೂಕಿನ ಧಂಗಾಪುರ ಗ್ರಾಮದ ನಿವಾಸಿ ರವಿ ಸುಭಾಷ ನೀಲೂರು (35) ಕೊಲೆ ನಡೆದಿತ್ತು. ಈ ಕೊಲೆಯ ತನಿಖೆ ನಡೆಸತ್ತಿದ್ದ ಪೊಲೀಸರು ಬುಧವಾರ ಅಫಜಲಪುರ ತಾಲ್ಲೂಕಿನ ಬಡದಾಳದ ನಿವಾಸಿಗಳಾದ ಹುಚ್ಚಪ್ಪ ಶಿವಪ್ಪ ಬಸರಿಗಿಡ, ಲಾಡಪ್ಪ ಮಹಾದೇವಪ್ಪ ಉದಯಕರ, ಘತ್ತರಗಿಯ ಬಸವರಾಜ ಶರಣಪ್ಪ ಸಿಂಗೆ ಹಾಗೂ ಮೃತ ವ್ಯಕ್ತಿಯ ಪತ್ನಿ ಚಂದ್ರಕಲಾ ರವಿ ನೀಲೂರು ಅವರನ್ನು ಬಂಧಿಸಿದ್ದಾರೆ.</p>.<p>‘ಆರೋಪಿ ಹುಚ್ಚಪ್ಪ ಬಸರಿಗಿಡ ಜತೆ ಮೃತ ವ್ಯಕ್ತಿಯ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಳು. ಇವರಿಬ್ಬರು ಸಂಚು ರೂಪಿಸಿ ಪ್ರಿಯಕರ ಹುಚ್ಚಪ್ಪ ತನ್ನ ಸಂಗಡಿಗರ ಜೊತೆಗೂಡಿ ಪತಿ ರವಿ ನೀಲೂರು ಅವರನ್ನು ಕೊಲೆ ಮಾಡಿರುವುದು ವಿಚಾರಣೆಯಲ್ಲಿ ಹೊರ ಬಿದ್ದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಿಪಿಐ ಮಂಜುನಾಥ, ಪಿಎಸ್ಐ ಸುವರ್ಣಾ ಮಲಶೆಟ್ಟಿ ಹಾಗೂ ಸಿಬ್ಬಂದಿ ಆರೋಪಿಗಳನ್ನು ಬಂಧಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>