ಕಳೆದ ಫೆಬ್ರುವರಿ 16ರಂದು ಪಟ್ಟಣ ಕ್ರಾಸ್ ಸಮೀಪದ ಮುಖ್ಯರಸ್ತೆಯಲ್ಲಿ ಆಳಂದ ತಾಲ್ಲೂಕಿನ ಧಂಗಾಪುರ ಗ್ರಾಮದ ನಿವಾಸಿ ರವಿ ಸುಭಾಷ ನೀಲೂರು (35) ಕೊಲೆ ನಡೆದಿತ್ತು. ಈ ಕೊಲೆಯ ತನಿಖೆ ನಡೆಸತ್ತಿದ್ದ ಪೊಲೀಸರು ಬುಧವಾರ ಅಫಜಲಪುರ ತಾಲ್ಲೂಕಿನ ಬಡದಾಳದ ನಿವಾಸಿಗಳಾದ ಹುಚ್ಚಪ್ಪ ಶಿವಪ್ಪ ಬಸರಿಗಿಡ, ಲಾಡಪ್ಪ ಮಹಾದೇವಪ್ಪ ಉದಯಕರ, ಘತ್ತರಗಿಯ ಬಸವರಾಜ ಶರಣಪ್ಪ ಸಿಂಗೆ ಹಾಗೂ ಮೃತ ವ್ಯಕ್ತಿಯ ಪತ್ನಿ ಚಂದ್ರಕಲಾ ರವಿ ನೀಲೂರು ಅವರನ್ನು ಬಂಧಿಸಿದ್ದಾರೆ.